ಮಾ.23: ಕುಮಾರಮಂಗಲ‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ

0

ಪುತ್ತೂರು: ಕುಮಾರಮಂಗಲ ಸುವರ್ಣಮಹೋತ್ಸವ ಆಚರಿಸಿದ ಶಾಲೆಯಾಗಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡಕೊಂಡಿರುತ್ತಾರೆ. ಸದ್ರಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘವನ್ನು ರಚನೆ ಮಾಡಬೇಕೆಂದು ಮಾನ್ಯ ಕರ್ನಾಟಕ ಸರಕಾರವು ಸುತ್ತೋಲೆಯನ್ನು ನೀಡಿರುತ್ತದೆ. ಆದುದರಿಂದ ದಿನಾಂಕ 23-03-2024ನೇ ಶನಿವಾರದಂದು ಪೂರ್ವಾಹ್ನ ಗಂಟೆ 10.30ಕ್ಕೆ ಸರಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಮಾರಮಂಗಲದಲ್ಲಿ ಸಮಾಲೋಚನಾ ಸಭೆಯನ್ನು ನಡೆಸುವುದೆಂದು ತೀರ್ಮಾನಿಸಲಾಗಿದೆ. ಹಿರಿಯ ವಿದ್ಯಾರ್ಥಿಗಳು ಸದ್ರಿ ಸಭೆಗೆ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ, ನೂತನ ಹಿರಿಯ ವಿದ್ಯಾರ್ಥಿಗಳ ಸಂಘದ ರಚನೆಗೆ ಸಹಕಾರ ನೀಡಬೇಕೆಂದು ಶಾಲೆಯ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here