ಮಾ.23: ರೈ ಎಜುಕೇಶನಲ್ ಟ್ರಸ್ಟ್‌ನಿಂದ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

0

ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ಜಂಟಿ ಆಶ್ರಯದಲ್ಲಿ ನಾಳೆ (ಮಾ.23) ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಾಗಾರ ನಡೆಯಲಿದೆ ಎಂದು ಟ್ರಸ್ಟ್‌ನ ಕಾಯಾಧ್ಯಕ್ಷ ಸುದೇಶ್ ಶೆಟ್ಟಿ ತಿಳಿಸಿದ್ದಾರೆ.


ಮಾ. 23 ರಂದು ಬೆಳಿಗ್ಗೆ 11 ಗಂಟೆಗೆ ಸುಂದರ ರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪಿಯುಸಿ ನಂತರ ವಿದ್ಯಾರ್ಥಿಗಳು ಯಾವ ಕೋರ್ಸು ಕಲಿತರೆ ಏನು ಉದ್ಯೋಗ ಪಡೆದುಕೊಳ್ಳಬಹುದು, ಕೋರ್ಸುಗಳು ಎಲ್ಲೆಲ್ಲಿ ಸಿಗುತ್ತದೆ, ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ವೃತ್ತಿಪರ ಕೋರ್ಸುಗಳು ಹೇಗೆ ಪರಿಣಾಮಕಾರಿ ಎಂಬ ವಿಚಾರದ ಬಗ್ಗೆ ಕಾರ್ಯಾಗಾರ ನಡೆಯಲಿದೆ.


ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೊಹಪಾತ್ರ ಕಾರ್ಯಾಗಾರವನ್ನು ಉದ್ಘಾಟನೆ ಮಾಡಲಿದ್ದಾರೆ.ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ಳಾರೆ ಸ.ಪ.ಪೂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಿ ವಿ ಸೂರ್ಯಾನಾರಾಯಣರವರು ಕಾರ್ಯಾಗಾರ ನಡೆಸಿಕೊಡಲಿದ್ದು, ಕಾರ್ಯಕ್ರಮದಲ್ಲಿ ಶ್ರೀರಾಮಕೃಷ್ಣ ಪ್ರೌಢ ಶಾಲೆ ಕೊಂಬೆಟ್ಟು ಇದರ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಕ್ಯಾಡೊಕಾನ್ ವಿದ್ಯಾ ಸಂಸ್ಥೆ ಬೆಂಗಳೂರು ಇದರ ಶ್ರದ್ದಾ ಎಂ ರವರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here