ಕುಂಬ್ರ: ಬಿಜೆಪಿ ಒಳಮೊಗ್ರು ಶಕ್ತಿಕೇಂದ್ರ ಸಭೆ

0

ಪುತ್ತೂರು:ಭಾರತೀಯ ಜನತಾ ಪಾರ್ಟಿ ಒಳಮೊಗ್ರು ಶಕ್ತಿಕೇಂದ್ರ ಲೋಕಸಭಾ ಚುನಾವಣೆ ಹಾಗೂ ಅಭ್ಯರ್ಥಿಯ ಮಹಾಶಕ್ತಿ ಕೇಂದ್ರ ಭೇಟಿಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ಬೂತ್ ಸಮಿತಿ ಅಧ್ಯಕ್ಷ ಪುರಂದರ ಶೆಟ್ಟಿ ಮುಡಾಲ ಇವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಚುನಾವಣಾ ಸಮಿತಿ ಸಂಚಾಲಕರಾದ ಚನಿಲ ತಿಮ್ಮಪ್ಪ ಶೆಟ್ಟಿ ಅವರು ಚುನಾವಣಾ ಬೂತ್ ಕಾರ್ಯ ಹಾಗೂ ಅಭ್ಯರ್ಥಿ ಭೇಟಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ  ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ , ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆ,ಪಾಣಾಜೆ ಮಹಾಶಕ್ತಿಕೇಂದ್ರ ಅಧ್ಯಕ್ಷ ಜಯರಾಮ ಪೂಜಾರಿ , ರೇಖನಾಥ ರೈ, ಒಳಮೊಗ್ರು ಶಕ್ತಿಕೇಂದ್ರ ಪ್ರಮುಖ್ ರಾಜೇಶ್ ರೈ ಪರ್ಪುಂಜ , ಒಳಮೊಗ್ರು ಪಂಚಾಯತ್ ಅಧ್ಯಕ್ಷೆ ತ್ರಿವೇಣಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಸೇರಿದಂತೆ ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಸಂಚಾಲಕರು ಹಾಗೂ ಪ್ರವಾಸಿ ಪ್ರಭಾರಿಗಳು, ಜಿಲ್ಲಾ , ಮಂಡಲ , ಮಹಾ ಶಕ್ತಿಕೇಂದ್ರ ಮಟ್ಟದ ಪ್ರಮುಖರು, ಜನಪ್ರತಿನಿಧಿಗಳು, ಸೊಸೈಟಿ ನಿರ್ದೇಶಕರುಗಳು, ಪೇಜ್ ಪ್ರಮುಖರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here