ಕೊಣಾಲು: ಕಡೆಂಬಿಲತ್ತಾಯ ಗುಡ್ಡೆ ದೈವಗಳ ನೇಮೋತ್ಸವ

0

ನೆಲ್ಯಾಡಿ: ಕೊಣಾಲು ಗ್ರಾಮದ ಕಡೆಂಬಿಲತ್ತಾಯ ಗುಡ್ಡೆ ಚಕ್ರವರ್ತಿ ಕೊಡಮಣಿತ್ತಾಯಿ ಮತ್ತು ಪರಿವಾರ ದೈವಗಳ 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ಮಾ.20 ಮತ್ತು 21ರಂದು ನಡೆಯಿತು.


ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಮಾ.20ರಂದು ಬೆಳಿಗ್ಗೆ ಕಡೆಂಬಿಲ ನಾಗಬನದಲ್ಲಿ ನಾಗತಂಬಿಲ, ಬಳಿಕ ದೈವಸ್ಥಾನದಲ್ಲಿ ಗಣಹೋಮ, ಕಲಶಪೂಜೆ, ದೈವಗಳಿಗೆ ಕಲಶಾಭಿಷೇಕ, ತಂಬಿಲ, ಮಹಾಪೂಜೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ತೋರಣ ಮುಹೂರ್ತ, ಗ್ರಾಮಸ್ಥರಿಂದ ದೈವಗಳಿಗೆ ಪ್ರಾರ್ಥನೆ, ಎಣ್ಣೆತ್ತೋಡಿಯಿಂದ ಶಿರಾಡಿ ದೈವದ ಭಂಡಾರ, ಕಾಯರ್ತಡ್ಕದಿಂದ ಕಲ್ಕುಡ, ಕಲ್ಲುರ್ಟಿ, ಗುಳಿಗ ದೈವಗಳ ಭಂಡಾರ ತರಲಾಯಿತು. ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಕಲ್ಕುಡ, ಕಲ್ಲುರ್ಟಿ, ಪಂಜುರ್ಲಿ, ದೈವಂಕ್ಲು, ಮೈಸಂತಾಯ, ಕಡೆಂಬಿಲತ್ತಾಯ, ಮಾ.21ರಂದು ಬೆಳಿಗ್ಗೆ ಚಕ್ರವರ್ತಿ ಕೊಡಮಣಿತ್ತಾಯಿ, ಶಿರಾಡಿ ದೈವದ ನೇಮೋತ್ಸವ ನಡೆದು ಬಟ್ಟಲು ಕಾಣಿಕೆ ನಡೆಯಿತು. ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಗುಳಿಗ ದೈವದ ನೇಮೋತ್ಸವ ನಡೆಯಿತು. ಓಬಯ್ಯ ಪರವ ಹಳೆನೇರೆಂಕಿ(ಚಕ್ರವರ್ತಿ ಕೊಡಮಣಿತ್ತಾಯಿ, ದೈವಂಕ್ಲು, ಮೈಸಂತಾಯ), ಲೋಕಯ್ಯ ಪರವ(ಕಡೆಂಬಿಲತ್ತಾಯ), ಯಾದವ ಹಳೆನೇರೆಂಕಿ(ಪಂಜುರ್ಲಿ)ನೀಲಯ್ಯ ನಳಿಕೆ ಕೊಕ್ಕಡ(ಶಿರಾಡಿ), ಸಂತೋಷ್ ಕೊಕ್ಕಡ(ಕಲ್ಕುಡ), ಪ್ರಮೋದ್ ಶಿಶಿಲ(ಕಲ್ಲುರ್ಟಿ), ಸಂದೇಶ್ ಕೊಕ್ಕಡ(ಗುಳಿಗ) ನರ್ತನ ಸೇವೆ ನಡೆಸಿದರು. ಗಿರೀಶ್ ಶಿಶಿಲ, ಶ್ರವಣ್ ಕೊಕ್ಕಡ, ಪ್ರಸಾದ್ ಆಲಂಕಾರು, ಸಂಪತ್ ಆಲಂಕಾರು, ಗಣೇಶ್ ಶಿಬಾಜೆ, ಗೋಪಾಲ ಕೊಕ್ಕಡ ಸಹಕರಿಸಿದರು.


ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸತೀಶ್ ರೈ ಕೊಣಾಲುಗುತ್ತು, ಉಪಾಧ್ಯಕ್ಷ ಜಗದೀಶ್ ಶೆಟ್ಟಿ ಕಡೆಂಬಿಲ, ಕಾರ್ಯದರ್ಶಿ ಚಂದಪ್ಪ ಗೌಡ ಕಾಯರ್ತಡ್ಕ, ಜೊತೆ ಕಾರ್ಯದರ್ಶಿ ವಿಶ್ವನಾಥ ಪೂಜಾರಿ ಕಲಾಯಿ, ಕೋಶಾಧಿಕಾರಿ ಧರ್ಣಪ್ಪ ಗೌಡ ಕೋಲ್ಪೆ, ಸದಸ್ಯರಾದ ಪ್ರಕಾಶ್ ಸುವರ್ಣ ಕುರುಂಬೊಟ್ಟು, ವಿಶ್ವನಾಥ ಪೂಜಾರಿ ಪಾಂಡಿಬೆಟ್ಟು ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ನೂರಾರು ಗ್ರಾಮಸ್ಥರು ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here