ಬಾಲಕನಿಗೆ ಹಲ್ಲೆ: ಅಪರಾಧಿಗೆ ಶಿಕ್ಷೆ

0

ಉಪ್ಪಿನಂಗಡಿ: ಆರು ವರ್ಷಗಳ ಹಿಂದೆ 12 ವರ್ಷದ ಬಾಲಕನ ಮೇಲೆ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಪ್ರಕರಣದ ಅಪರಾಧಿ ಪೆರ್ನೆಯ ಚಾರ್ಲಿ ಮಿನೇಜಸ್‌ಗೆ ಪುತ್ತೂರು ನ್ಯಾಯಾಲಯವು 1 ವರ್ಷ 6 ತಿಂಗಳ ಕಾರಾಗೃಹ ವಾಸ ಹಾಗೂ 3,೦೦೦ ರೂ. ದಂಡವನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.
2018 ರಲ್ಲಿ ಆರೋಪಿ ಚಾರ್ಲಿ ಮಿನೇಜಸ್ ತನ್ನ ತಮ್ಮನ ಮಗನಾದ ಹನ್ನೆರಡರ ಹರೆಯದ ಬಾಲಕನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದು, ಇದರ ಪರಿಣಾಮ ಬಾಲಕನ ತಲೆ, ಎಡಕಿವಿ, ಬೆನ್ನಿನ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರು ನ್ಯಾಯಾಲಯದ ನ್ಯಾಯಾಧೀಶರಾದ ಶಿವಣ್ಣ ರವರು ಆರೋಪಿಗೆ ಒಂದು ವರ್ಷ ಆರು ತಿಂಗಳ ಕಾರಾಗೃಹ ಶಿಕ್ಷೆ ಘೋಷಿಸಿ , ಮೂರು ಸಾವಿರ ರೂಪಾಯಿ ದಂಡವನ್ನೂ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಸದ್ರಿ ಪ್ರಕರಣದಲ್ಲಿ ಸರಕಾರಿ ಸಹಾಯಕ ಅಭಿಯೋಜಕರರಾದ ಕವಿತಾ ಅವರು ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here