ಕುಂಜೂರು ಸತ್ಯದೇವತೆ ಕಲ್ಲುರ್ಟಿ ದೈವಸ್ಥಾನದಲ್ಲಿ ನೇಮೋತ್ಸವ

0

ಪುತ್ತೂರು: ಆರ್ಯಾಪು ಗ್ರಾಮದ ಕುಂಜೂರು ಶ್ರೀಸತ್ಯದೇವತೆ ಕಲ್ಲುರ್ಟಿ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠಾಪನೆಗೊಂಡು, 30ನೇ ವರ್ಷದ ದೈವಗಳ ನೇಮೋತ್ಸವವು ಮಾ.20 ರಂದು ನಡೆಯಿತು.

ಸಂಜೆ ದೈವಗಳ ಭಂಡಾರ ತೆಗೆದು, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದ ಬಳಿಕ ಶ್ರೀ ಸತ್ಯದೇವತೆ ಕಲ್ಲುರ್ಟಿ ಹಾಗೂ ಗುಳಿಗ ದೈವದ ನೇಮ ನಡೆಯಿತು. ಮಾ.21ರಂದು ದೈವಗಳಿಗೆ ಅಗೇಲು ಸೇವೆ ನೆರವೇರಿತು.

ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಎಚ್.ಎಂ. ಕೃಷ್ಣ ಕುಮಾರ್ ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ನೇಮೋತ್ಸವದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here