ಷಣ್ಮುಖ ಯುವಕ ಮಂಡಲದ ವತಿಯಿಂದ ಭಕ್ತಕೋಡಿ ಶಾಲಾ ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ

0

ಪುತ್ತೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಇದರ ವತಿಯಿಂದ ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆಯ ಸುತ್ತಮುತ್ತ ಸ್ವಚ್ಚತಾ ಶ್ರಮದಾನ ನಡೆಸಲಾಯಿತು.


ಮುಳ್ಳು ಪೊದೆ ಬೆಳೆದು ವಿಷ ಜಂತುಗಳ ಆವಾಸ ಸ್ಥಾನವಾಗುವ ರೀತಿಯಲ್ಲಿದ್ದ ಈ ಪ್ರದೇಶದ ಸುತ್ತಮುತ್ತ ಇದ್ದ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಚಗೊಳಿಸಲಾಯಿತು. ಷಣ್ಮುಖ ಯುವಕ ಮಂಡಲ ಪ್ರತೀ ವರ್ಷವೂ ಇಲ್ಲಿ ಸ್ವಚ್ಚತಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ.
ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷ ಗೌತಮ್‌ರಾಜ್ ಕರುಂಬಾರು, ಖಜಾಂಜಿ ಗುರುರಾಜ್ ಪಟ್ಟೆಮಜಲು, ಕೃಷಿ ಮತ್ತು ಪರಿಸರ ಕಾರ್ಯದರ್ಶಿ ನಾಗೇಶ್ ಪಟ್ಟೆಮಜಲು, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಸುಬ್ರಹ್ಮಣ್ಯ ಕರುಂಬಾರು ಹಾಗೂ ರಾಜೇಶ್ ಎಸ್.ಡಿ, ಸಾಂಸ್ಕೃತಿಕ ಕಾರ್ಯದರ್ಶಿ ನಂದನ್ ಕೆ ಸರ್ವೆದೋಳಗುತ್ತು, ಸದಸ್ಯರಾದ ಪ್ರಭಾಕರ್ ಎಸ್.ಡಿ, ಕೃಷ್ಣಪ್ಪ ಪಾಲೆತ್ತಗುರಿ ಹಾಗೂ ಅಮರ್‌ರಾಜ್ ಭಕ್ತಕೋಡಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here