ಆತೂರು: ಶ್ರೀ ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

0

ಕಡಬ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನದಲ್ಲಿ ಶನಿವಾರ ಪ್ರತಿಷ್ಠಾಮಹೋತ್ಸವ ಅಂಗವಾಗಿ ವಿವಿಧ ವೈಧಿಕ ಕಾರ್ಯಕ್ರಮ ನಡೆಯಿತು.ಬೆಳಿಗ್ಗೆ ಗಣಪತಿ ಹೋಮ, ಪಂಚವಿಶಂತಿ ಕಲಶಾಭಿಷೇಕ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ನಾಗದೇವರಿಗೆ ಆಶ್ಲೇಷ ಬಲಿ, ಕಲಶಾಭಿಷೇಕ, ತಂಬಿಲ , ಶ್ರೀ ಸದಾಶಿವ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.


ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ದೇವಸ್ಥಾನದ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಸೇರಿದಂತೆ ಅರ್ಚಕ ವೃಂದ ಧಾರ್ಮಿಕ ವಿಧಿವಿಧಾನವನ್ನು ನೆರವೇರಿಸಿದರು. ಉತ್ಸವ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಪ್ರಧಾನ ಕಾರ್ಯದರ್ಶಿ ಶಶಿ ಕುಮಾರ್ ಅಂಬಾ, ಅಭಿವೃದ್ದಿ ಸಮಿತಿ ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಬೈಲುವಾರು ಸಮಿತಿ ಸಂಚಾಲಕ ಭವಿತ್‌ರಾಜ್ ಪಟ್ಟೆ , ಉತ್ಸವ ಸಮಿತಿ ಉಪಾಧ್ಯಕ್ಷರಾದ ಧರ್ಣಪ್ಪ ಗೌಡ ಕೊರಿಕ್ಕಾರು, ಚಂದ್ರಹಾಸ ರೈ ಬುಡಲೂರು, ಮೋಹನದಾಸ ಶೆಟ್ಟಿ ಬಡಿಲ, ರಾಜೀವ ಗೌಡ ಪೊಸಲಕ್ಕೆ , ದಾಮಣ್ಣ ಗೌಡ ಕಾಯರಟ್ಟ, ಕಾರ್ಯದರ್ಶಿಗಳಾದ ಶಾಂತರಾಮ ಬೆಂಗದಪಡ್ಪು, ತಿಮ್ಮಪ್ಪ ಸಂಕೇಶ, ಉತ್ಸವ ಸಮಿತಿ ಸದಸ್ಯರಾದ ಮೋಹಿನಿ ಪಾನ್ಯಾಲು, ಮುರಳಿಕೃಷ್ಣ ಕೆ ಬಡಿಲ, ವಿನಯ ಕುಮಾರ್ ರೈ ಕೊಯಿಲ ಪಟ್ಟೆ, ಶ್ರೀರಾಮ ಕೆಮ್ಮಾರ, ಸಂಜೀವ ಗೌಡ ಕೊನೆಮಜಲು ಸೇರಿದಂತೆ ವಿವಿಧ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here