ಪುತ್ತೂರು ನಗರ ಪೊಲೀಸರಿಂದ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ – ರೂ.6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

0

ಪುತ್ತೂರು: ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿ ಈಸ್ವರಿ(45) ಎಂಬಾಕೆಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಫೆ.12ರಂದು ಪುತ್ತೂರು ನಗರದ ಕೆ ಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದಲ್ಲಿ ತನ್ನ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳು ಕಳವು ಹೋದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ರೇಷ್ಮಾ ಎನ್ ಎಂಬವರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿ, ತಮಿಳುನಾಡಿನ ಕೋಯಂಬತ್ತೂರ್ ಜಿಲ್ಲೆಯ ಸಿಕ್ಕಲಂಪಳಯಂ ಸೋಲವಂಪಳಯಂ ನ ಶಕ್ತಿ ನಗರ ನಿವಾಸಿ ಅಂತರ್ ರಾಜ್ಯ ನಟೋರಿಯಸ್ ಕಳ್ಳಿ ಈಸ್ವರಿ (45) ಎಂಬಾಕೆಯನ್ನು ಬಂಧಿಸಿದ್ದಾರೆ. ಬಂಧಿತಳಿಂದ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಭೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್ ಎನ್ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕ ಸತೀಶ್ ಜಿ ಜಿ, ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಮರಿಯ ಎಮ್ ಎ., ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ಭಾಗವಹಿಸಿರುತ್ತಾರೆ.

LEAVE A REPLY

Please enter your comment!
Please enter your name here