ಉಪ್ಪಿನಂಗಡಿ: ಕ್ಯಾ. ಬ್ರಿಜೇಶ್ ಚೌಟರಿಂದ ದೇವಾಲಯಗಳಲ್ಲಿ ಪ್ರಾರ್ಥನೆ

0

ಉಪ್ಪಿನಂಗಡಿ: ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮಾ.22ರಂದು ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯ ಹಾಗೂ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕರುಣಾಕರ ಸುವರ್ಣ, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ, ಸಹಜ್ ರೈ, ಆರ್.ಸಿ. ನಾರಾಯಣ, ಸುನೀಲ್ ಕುಮಾರ್ ದಡ್ಡು, ಮುಕುಂದ ಬಜತ್ತೂರು, ಸರೇಶ್ ಅತ್ರೆಮಜಲು, ಸಚಿನ್, ಸುಂದರ ಗೌಡ ಅರ್ಬಿ, ಲಕ್ಷ್ಮಣ್ ಬೆಳ್ಳಿಪ್ಪಾಡಿ, ರಾಮಚಂದ್ರ ಮಣಿಯಾಣಿ, ಜಯಂತ ಪೊರೋಳಿ, ಉಮೇಶ್ ಶೆಣೈ, ಉಚಾಚಂದ್ರ ಮುಳಿಯ, ಪುರುಷೋತ್ತಮ ಮುಂಗ್ಲಿಮನೆ, ಸಂತೋಷ್ ಕುಮಾರ್ ಪಂರ್ದಾಜೆ, ವಿದ್ಯಾಧರ ಜೈನ್, ಧನಂಜಯ ನಟ್ಟಬೈಲ್, ಸದಾನಂದ ನೆಕ್ಕಿಲಾಡಿ, ಆದೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


ಬಳಿಕ ಕ್ಯಾ. ಬ್ರಿಜೇಶ್ ಚೌಟ ಅವರು ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೇವಾಲಯದ ವ್ಯವಸ್ಥಾಪಕರಾದ ರಾಮಕೃಷ್ಣ ಪ್ರಭು, ಮಂಜುನಾಥ್ ನಾಯಕ್, ಪ್ರಮುಖರಾದ ಕೆ. ಹರೀಶ್ ಕಿಣಿ, ರಾಘವೇಂದ್ರ ನಾಯಕ್ ಕರಾಯ, ರಾಜೇಶ್ ಪೈ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here