ಎಸ್ಕೆಎಸ್ಸೆಸ್ಸೆಫ್ ತಿಂಗಳಾಡಿ ಶಾಖೆ ವತಿಯಿಂದ ಮಜ್ಲಿಸುನ್ನೂರ್, ಇಫ್ತಾರ್ ಮೀಟ್

0

ಪುತ್ತೂರು: ಎಸ್ಕೆಎಸ್ಸೆಸ್ಸೆಫ್ ತಿಂಗಳಾಡಿ ಶಾಖೆ ವತಿಯಿಂದ ಮಜ್ಲಿಸುನ್ನೂರ್ ಹಾಗೂ ಇಫ್ತಾರ್ ಮೀಟ್ ಮಾ.22ರಂದು ತಿಂಗಳಾಡಿ ಜಿಸ್ತಿಯಾ ಮದ್ರಸ ವಠಾರದಲ್ಲಿ ನಡೆಯಿತು.
ಗಾಳಿಮುಖ ಬದ್ರಿಯಾ ಜುಮಾ ಮಸೀದಿಯ ಖತೀಬ್ ಆದಂ ದಾರಿಮಿ ಮಜ್ಲಿಸುನ್ನೂರ್‌ಗೆ ನೇತೃತ್ವ ನೀಡಿದರು.

ಅಬೂಬಕ್ಕರ್ ದಾರಿಮಿ ದುವಾ ಮಾಡಿದರು. ಎಸ್ಕೆಎಸ್ಸೆಸ್ಸೆಫ್ ಕುಂಬ್ರ ವಲಯ ಅಧ್ಯಕ್ಷ ಮನ್ಸೂರ್ ಅಸ್ಲಮಿ ಶುಭ ಹಾರೈಸಿದರು. ಎಸ್ಕೆಎಸ್ಸೆಸ್ಸೆಫ್ ತಿಂಗಳಾಡಿ ಶಾಖೆಯ ಅಧ್ಯಕ್ಷ ಅಬ್ದುಲ್ ಸಮದ್ ಬಿ.ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್ಕೆಎಸ್ಸೆಸ್ಸೆಫ್ ಕುಂಬ್ರ ವಲಯ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ಹಾಜಿ ದರ್ಬೆ ಮತ್ತಿತರರು ಉಪಸ್ಥಿತರಿದ್ದರು. ಇಫ್ತಾರ್ ಕೂಟದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಎಸ್ಕೆಎಸ್ಸೆಸ್ಸೆಫ್ ತಿಂಗಳಾಡಿ ಶಾಖೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಸೊರಕೆ ಹಾಗೂ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.

LEAVE A REPLY

Please enter your comment!
Please enter your name here