ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕೂಲಿ ಕಾರ್ಮಿಕರ ಮಾತಿನ ಚಕಮಕಿ ಚೂರಿ ಇರಿತ ಪ್ರಕರಣ ದಾಖಲು

0

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಾ.25ರಂದು ಕೂಲಿ ಕಾರ್ಮಿಕರ ನಡುವೆ ನಡೆದ ಹಲ್ಲೆ ಪ್ರಕರಣದಲ್ಲಿ ಚೂರಿ ಇರಿತದಿಂದ ಗಾಯಗೊಂಡವರ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಚೂರಿ ಇರಿತ ಪ್ರಕರಣ ದಾಖಲಾಗಿದೆ.
ಬೆಳಗಾಂ ಜಿಲ್ಲೆಯ ಮಲ್ಲಪುರ ಗೋಕಾಕ್ ನಿವಾಸಿ ಕೂಲಿ ಕಾರ್ಮಿಕ ಆನಂದ ಬಾಂದಾವಿ(35 ವ)ರವರು ಚೂರಿ ಇರಿತಕ್ಕೊಳಗಾದವರು. ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರು ಪುತ್ತೂರು ಕೆ.ಎಸ್. ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ, ಪಿರ್ಯಾದಿದಾರರ ಪರಿಚಯದ ಅವಿನಾಶ್, ನಾರಾಯಣ, ದುರ್ಗೇಶ್ ಮತ್ತು ಹರೀಶ್ ಎಂಬವರೊಂದಿಗೆ ಕುಳಿತುಕೊಂಡು ಮಾತನಾಡುತ್ತಿದ್ದಾಗ, ಆರೋಪಿ ಅವಿನಾಶ್ ಏಕಾಏಕಿಯಾಗಿ ಆನಂದ ಅವರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿಬಳಿಕ ಚಾಕುವಿನಿಂದ ಆನಂದ್ ಅವರ ಹೊಟ್ಟೆಗೆ ಚೂರಿ ಇರಿದಿದ್ದಾನೆ. ಘಟನೆಯಿಂದ ತೀರ್ವ ಗಾಯಗೊಂಡ ಆನಂದ್ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here