ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ ಅಂಗವಾಗಿ ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

0

ಪುತ್ತೂರು: ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಮಾ.21ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಅಂಗವಾಗಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತಾ ಸಪ್ತಾಹ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು.

ಪುತ್ತೂರು ನಗರದ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ದಿನೇಶ್ ಹಾಗೂ ವಿನಯ್ ಇವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟು, ರಸ್ತೆಯಲ್ಲಿ ಪಾಲಿಸಬೇಕಾದ ನಿಯಮ ಮತ್ತು ಅವುಗಳ ಕುರಿತಂತೆ ಪ್ರಾಯೋಗಿಕವಾಗಿ ಮಾಹಿತಿಗಳನ್ನು ನೀಡಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಭರತ್ ಪೈ, ಶಾಲಾ ಮುಖ್ಯ ಗುರು ಸಿಂಧು ವಿ.ಜಿ ಉಪಸ್ಥಿತರಿದ್ದರು. ಸ್ಕೌಟ್ ಮಾಸ್ಟರ್ ರಮೇಶ್ ಮತ್ತು ಗೈಡ್ ಕ್ಯಾಪ್ಟನ್ ಪ್ರಫುಲ್ಲ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here