ಕುದ್ಕಾಡಿ ಮನೆತನದ ಶ್ರೀ ರಕ್ತೇಶ್ವರೀ ಮತ್ತು ಪರಿವಾರ ದೈವಗಳ ನೇಮೋತ್ಸವ

0

ಬಡಗನ್ನೂರು: ಕುದ್ಕಾಡಿ ಮನೆತನದ ಶ್ರೀ ರಕ್ತೇಶ್ವರೀ ಮತ್ತು ಪರಿವಾರ ದೈವಗಳ ನೇಮೋತ್ಸವ ಹಾಗೂ ಶ್ರೀ ಧರ್ಮದೈವ ವರ್ಣಾರ ಪಂಜುರ್ಲಿ ಮತ್ತು ಪರಿವಾರ ದೈವಗಳ ನೇಮೋತ್ಸವ ಮಾ.24 ಮತ್ತು 25ರಂದು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಯವರ ಮಾರ್ಗದರ್ಶನದಲ್ಲಿ  ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರ ನೇತ್ರತ್ವದಲ್ಲಿ ಶ್ರೀ ಕ್ಷೇತ್ರ ಪಡುಮಲೆ ಇದರ ಪ್ರಧಾನ ಅರ್ಚಕ ಮಹಾಲಿಂಗ ಭಟ್ ರವರ ಸಹಭಾಗಿತ್ವದಲ್ಲಿ ನಡೆಯಿತು.

ಮಾ.25ರಂದು ಸಂಜೆ ಗಂ 7.30 ರಿಂದ ತರವಾಡು ಮನೆಯಿಂದ ಭಂಡಾರ ತೆಗೆದ ಬಳಿಕ ಅನ್ನಸಂತರ್ಪಣೆ ನಡೆಯಿತು. ನಂತರ ದೇವತೆ, ವರ್ಣಾರ ಪಂಜುರ್ಲಿ, ಕಲ್ಲುರ್ಟಿ ಮತ್ತು ಸ್ಥಳದ ಗುಳಿಗ ದೈವಗಳ ನೇಮ ನಡೆಯಿತು.

ಈ ಸಂದರ್ಭದಲ್ಲಿ  ಕುದ್ಕಾಡಿ ಮನೆತನದ ಯಜಮಾನ ಬಾಲಕೃಷ್ಣ ರೈ ಕುದ್ಕಾಡಿ  ಹಾಗೂ ಕುಟುಂಬಸ್ಥರು ಹಾಗೂ ಊರಿನವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ  ಸುಮಾರು ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here