ಆರ್ಯಾಪು ಪ್ರಾ.ಕೃ.ಪ.ಸ ಸಂಘದಿಂದ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಎಸ್.ಬಿ ಜಯರಾಮ ರೈ ಬಳೆಜ್ಜ ಇವರಿಗೆ ಸನ್ಮಾನ

0

ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಚುನಾವಣೆಯಲ್ಲಿ ಅವಿರೋಧವಾಗಿ ಸತತ 3 ನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಎಸ್.ಬಿ ಜಯರಾಮ ರೈ ಬಳೆಜ್ಜ ರವರಿಗೆ ಆರ್ಯಾಪು ಸಹಕಾರಿ ಸಂಘದ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.

ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಹೆಚ್. ಮಹಮ್ಮದ್ ಆಲಿ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹಮ್ಮದ್ ಬಡಗನ್ನೂರು ರವರು ಅಭಿನಂದನಾ ಭಾಷಣವನ್ನು ಮಾಡಿದರು. ಸನ್ಮಾನ ಸ್ವೀಕರಿಸಿದ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಎಸ್.ಬಿ ಜಯರಾಮ ರೈ ಬಳೆಜ್ಜ ರವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ತಮ್ಮನ್ನು ಗೌರವಿಸಿದ್ದಕ್ಕಾಗಿ ಕೃತಜ್ಙತೆ ಸಲ್ಲಿಸಿದರು.

ಈ ಸಮಾರಂಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುರೇಂದ್ರ ರೈ ಬಳ್ಳಮಜಲು, ನಿರ್ದೇಶಕರುಗಳಾದ ಸದಾನಂದ ಶೆಟ್ಟಿ ಕೂರೇಲು, ಗಣೇಶ್ ರೈ ತೊಟ್ಲ, ರಂಜಿತ್ ಬಂಗೇರಾ, ಗಣೇಶ್ ರೈ ಕುರಿಯ, ಇಸ್ಮಾಯಿಲ್ ಮಲಾರು, ಸಂಶುದ್ದೀನ್ ನೀರ್ಕಜೆ, ಶೀನಪ್ಪ ಮರಿಕೆ, ತಿಮ್ಮಪ್ಪ ನಾಯ್ಕ ಜಂಗಮುಗೇರು, ತೆರೆಸಾ ಸಿಕ್ವೇರಾ, ಸತೀಶ್ ನಾಕ್ ಪರ್ಲಡ್ಕ, ಕೇಂದ್ರ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕ ಶರತ್ ಡಿ. ಆರ್ಯಾಪು ಗ್ರಾ.ಪಂ ಸದಸ್ಯರಾದ ಪವಿತ್ರ ರೈ, ನವೋದಯ ಪ್ರೇರಕಿ ಮೋಹಿನಿ, ಸಿಬ್ಬಂದಿಗಳಾದ ಅಜಿತ್ ಕುಮಾರ್ ರೈ, ಸುಭಾಷಿನಿ ವಿ ರೈ, ವಿನಯ ಕುಮಾರ್ ರೈ, ರಾಜೇಶ್ ಕುಮಾರ್, ಅರ್ಜುನ್ ಭಾಸ್ಕರ್, ಪ್ರಶಾಂತಿ ಹಾಗೂ ನವೋದಯ ಸ್ವಸಹಾಯ ಸಂಗದ ಸದಸ್ಯರುಗಳು ಭಾಗವಹಿಸಿದ್ದರು. ಸಂಘದ ಸಿಬ್ಬಂದಿ ಉಮೇಶ್ ಎಸ್.ಕೆ ಸ್ವಾಗತಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್ ರವರು ವಂದಿಸಿದರು.

LEAVE A REPLY

Please enter your comment!
Please enter your name here