ಪುತ್ತೂರು ವಕೀಲರ ಸಂಘದ ಆಡಳಿತ ಮಂಡಳಿಯ ಚುನಾವಣೆ- 10 ಮಂದಿ ನಾಮಪತ್ರ ಸಲ್ಲಿಕೆ

0

ಅಧ್ಯಕ್ಷ ಸ್ಥಾನಕ್ಕೆ 3, ಕಾರ್ಯದರ್ಶಿ ಸ್ಥಾನಕ್ಕೆ 1, ಉಪಾಧ್ಯಕ್ಷ, ಜತೆಕಾರ್ಯದರ್ಶಿ, ಕೋಶಾಧಿಕಾರಿ ಸ್ಥಾನಕ್ಕೆ ತಲಾ 2 ನಾಮಪತ್ರ ಸಲ್ಲಿಕೆ

ಪುತ್ತೂರು: ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ 2024- 25 ರಿಂದ 2025-26ರ ಸಾಲಿನ 2 ವರ್ಷಗಳ ಅವಧಿಗೆ ಹೊಸ ಆಡಳಿತ ಮಂಡಳಿಯ ಚುನಾವಣೆ ಏ.6ರಂದು ನಡೆಯಲಿದ್ದು, ಚುನಾವಣೆಗೆ ಸಂಬಂಧಿಸಿ ನಾಮಪತ್ರ ಸಲ್ಲಿಕೆಗೆ ಮಾ.28ಕ್ಕೆ ಕೊನೆಯ ದಿನಾಂಕವಾಗಿದ್ದರಿಂದ ವಿವಿಧ ಜವಾಬ್ದಾರಿಗಳಿಗೆ ಒಟ್ಟು 10 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.


ಮಾ.28ರಂದು ಉಪಾಧ್ಯಕ್ಷ ಸ್ಥಾನಕ್ಕೆ ಮೋನಪ್ಪ ಎಂ ಅಳಿಕೆ, ಕಾರ್ಯದರ್ಶಿ ಸ್ಥಾನಕ್ಕೆ ಚಿನ್ಮಯ್ ರೈ ಈಶ್ವರಮಂಗಲ, ಜತೆಕಾರ್ಯದರ್ಶಿ ಸ್ಥಾನಕ್ಕೆ ಮಮತಾ ಸುವರ್ಣ ಬಿ, ಕೋಶಾಧಿಕಾರಿ ಸ್ಥಾನಕ್ಕೆ ಮಹೇಶ್ ಕೆ ಸವಣೂರು ಮತ್ತು ಚಿದಾನಂದ ರೈ ಕೋಡಿಂಬಾಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ.


ಇಲ್ಲಿನ ತನಕ ಒಟ್ಟು 10 ಮಂದಿ ನಾಮಪತ್ರ ಸಲ್ಲಿಸಿದ್ದು, ಒಟ್ಟು ಚುನಾವಣೆಗೆ ಸಂಬಂಧಿಸಿ ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಕಜೆ, ಜಿ. ಜಗನ್ನಾಥ ರೈ, ಸಂತೋಷ್ ಕುಮಾರ್ ಎಂ, ಉಪಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ ನಂದಿಲ, ಮೋನಪ್ಪ ಎಂ. ಅಳಿಕೆ, ಕಾರ್ಯದರ್ಶಿ ಚಿನ್ಮಯ್ ರೈ ಈಶ್ವರಮಂಗಲ, ಜತೆ ಕಾರ್ಯದರ್ಶಿ ಸ್ಥಾನಕ್ಕೆ ಹೀರಾ ಉದಯ್, ಮಮತಾ ಸುವರ್ಣ. ಬಿ, ಕೋಶಾಧಿಕಾರಿ ಸ್ಥಾನಕ್ಕೆ ಮಹೇಶ್ ಕೆ. ಸವಣೂರು ಮತ್ತು ಚಿದಾನಂದ ರೈ. ಕೊಡಿಂಬಾಡಿ ಅವರು ನಾಮ ಪತ್ರ ಸಲ್ಲಿಸಿದ್ದಾರೆ.

ಮಾ.29ಕ್ಕೆ ಬೆಳಿಗ್ಗೆ ಗಂಟೆ 10ಕ್ಕೆ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯಲಿದೆ. ಎ.2ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಏ.6ಕ್ಕೆ ಚುನಾವಣೆ ನಡೆಯಲಿದೆ. ಮತದಾನವು ವಕೀಲರ ಸಂಘದ ಪರಾಶರ ಸಭಾಭವನದಲ್ಲಿ ಬೆಳಿಗ್ಗೆ ಗಂಟೆ 10 ರಿಂದ ಸಂಜೆ ಗಂಟೆ 4ರ ತನಕ ನಡೆಯಲಿದೆ. ಅದೇ ದಿನ ಸಂಜೆ ಗಂಟೆ 4 ರಿಂದ ಮತ ಎಣಿಕೆಯು ನಡೆಯಲಿದೆ. ಈ ಎಲ್ಲಾ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿ ಚುನಾವಣಾಧಿಕಾರಿಗಳಾಗಿ ಕೆ.ಭಾಸ್ಕರ್ ಕೋಡಿಂಬಾಳ, ಎನ್ ಕಿಶೋರ್ ಕೊಳತ್ತಾಯ, ದೀಪಕ್ ಬೊಳುವಾರು ಅವರು ಕರ್ತವ್ಯ ನಿರ್ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here