ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು -ದೂರು

0

ನೆಲ್ಯಾಡಿ: ತೋಟದಲ್ಲಿ ಮೇಯಲು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿ ಮಾ.೨೫ರಂದು ನಡೆದಿದೆ.

ಶಬರಾಡಿ ನಿವಾಸಿ ಶಿವಪ್ರಸಾದ್ ಎಂಬವರು ಮಾ.೨೫ರಂದು ಬೆಳಿಗ್ಗೆ ತನ್ನ ದನವನ್ನು ತನ್ನ ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದು, ಮಧ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಎಲ್ಲಾ ಕಡೆ ಹುಡುಕಾಡಿದರೂ ದನ ಪತ್ತೆಯಾಗಿಲ್ಲ. ಕಳವಾದ ದನದ ಮೌಲ್ಯ ರೂ ೨೦,೦೦೦ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಶಿವಪ್ರಸಾದ್ ಅವರು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: ೨೧/೨೦೨೪ ಕಲಂ: ೩೭೯ ಐPಇ ಯಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here