ನಾಳೆ ಕಡಬಕ್ಕೆ ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಭೇಟಿ:ಕಾರ್ಯಕರ್ತರ ಸಭೆ- ಚುನಾವಣಾ ಕಛೇರಿ ಉದ್ಘಾಟನೆ

0

ಕಡಬ: ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ರವರು ನಾಳೆ ಕಡಬಕ್ಕೆ ಭೇಟಿ ನೀಡಲಿದ್ದು ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆ ಹಾಗೂ ಪಕ್ಷದ ಚುನಾವಣಾ ಕಛೇರಿಯನ್ನು ಉದ್ಘಾಟಿಸಲಿದ್ದಾರೆ.

ಮಾ.30ರಂದು ಅಪರಾಹ್ನ 2 ಗಂಟೆ ಗೆ ಕಡಬ ಒಕ್ಕಲಿಗ ಗೌಡರ ಸಮುದಾಯ ಭವನದಲ್ಲಿ ನಡೆಯುವ ಕಾರ್ಯಕರ್ತರ ಸಮಲೋಚನಾ ಸಭೆಯಲ್ಲಿ ಪದ್ಮರಾಜ್ ರಾಮಯ್ಯ ರವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ , ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ರವರು,ದಕ್ಷಿಣ ಕನ್ನಡ ಜಿಲ್ಲೆಯ ಚುಣಾವಣಾ ಉಸ್ತುವಾರಿ ರಮನಾಥ ರೈ, ಸುಳ್ಯ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಮಮತಾ ಗಟ್ಟಿ,ಸುಳ್ಯ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ವೀಕ್ಷಕ ಜಯಪ್ರಕಾಶ್ ರೈ ಯವರು, ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕ ಕಿರಣ್ ಬುಡ್ಲೆಗುತ್ತು , ಸುಳ್ಯ ವಿಧಾನಸಭೆ ಕ್ಷೇತ್ರದ ಕೆಪಿಸಿಸಿ ಸಂಯೋಜಕ ಕೃಷ್ಣಪ್ಪ ಜಿ ಹಾಗೂ ಪಕ್ಷದ ಮುಖಂಡರುಗಳು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರುಗಳು, ಡಿಸಿಸಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಮುಂಚೂಣಿ ಘಟಕಗಳ ಪಧಾದಿಕಾರಿಗಳು ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಪದಾಧಿಕಾರಿಗಳು,ಮಾಜಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಸದಸ್ಯರುಗಳು, ಗ್ರಾಮ ಪಂಚಾಯತಿ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಗ್ರಾಮ ಅಧಕ್ಷರುಗಳು,ಬೂತ್ ಸಮಿತಿ ಅಧ್ಯಕ್ಷರುಗಳು ಹಾಗೂ ಪಕ್ಷದ ಮುಖಂಡರುಗಳು ಭಾಗವಹಿಸಬೇಕೆಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿಯವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here