ಸಾಲ ಬಾಧೆಯಿಂದ ರೈತ ಆತ್ಮಹತ್ಯೆ – ಮೃತರ ಮನೆಗೆ ರೈತ ಸಂಘದ ನಿಯೋಗ ಭೇಟಿ

0

ಉಪ್ಪಿನಂಗಡಿ: ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ರೈತ ಕೊಯಿಲ ಗ್ರಾಮದ ಬುಡಲೂರು ನಿವಾಸಿ ಶಿವಣ್ಣ ಗೌಡರ ಮನೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಮುಖಂಡರು ಭೇಟಿ ನೀಡಿ ಮೃತರ ಮನೆಯವರಿಗೆ ಸಾಂತ್ವಾನ ಹೇಳಿದರು.
ಮನೆಯಲ್ಲಿದ್ದ ಮೃತರ ಪತ್ನಿ ಸುಶೀಲ ಹಾಗೂ ಮಕ್ಕಳಿಂದ ಮಾಹಿತಿ ಪಡೆದ ಅವರು ಅವರ ಕುಟುಂಬಕ್ಕೆ ಸರಕಾರದಿಂದ ಸಿಗುವ ಸೌಲಭ್ಯವನ್ನು ಶೀಘ್ರ ದೊರಕಿಸಿಕೊಡಲು ನೆರವಾಗುವುದಾಗಿ ಭರವಸೆ ನೀಡಿದರಲ್ಲದೆ, ಮೃತರ ಮನೆಯವರಿಗೆ ಸಾಂತ್ವಾನ ಹೇಳಿದರು. ಶಿವಣ್ಣ ಗೌಡರವರು ಸ್ಥಳೀಯ ಸಹಕಾರಿ ಸಂಘದಲ್ಲಿ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್‌ನಲ್ಲಿ ಹಾಗೂ ಕೈಸಾಲ ಸೇರಿದಂತೆ ಸುಮಾರು 10ಲಕ್ಷಕ್ಕೂ ಅಧಿಕ ಕೃಷಿಗಾಗಿ ಸಾಲ ಮಾಡಿದ್ದರು. ಅದನ್ನು ಮರು ಪಾವತಿಸಲು ಸಾಧ್ಯವಾಗದೇ ಅವರು ಆತ್ಮಹತ್ಯೆ ಮಾಡಿಕೊಂಡರು.
ರೈತ ಸಂಘದ ನಿಯೋಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ (ಸಾಮೂಹಿಕ ನಾಯಕತ್ವ) ಜಿಲ್ಲಾಧ್ಯಕ್ಷ ರೂಪೇಶ್ ರೈ ಅಲಿಮಾರ್, ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಭಟ್ ಪಾದೆಕಲ್ಲು, ಕಾರ್ಯದರ್ಶಿ ಇಬ್ರಾಹೀಂ ಖಲೀಲ್ ಪುಚ್ಚೆತ್ತಡ್ಕ ಹಾಗೂ ಜಿಲ್ಲಾ ಮಹಿಳಾ ಮುಖಂಡೆ ಅನಿ ಮಿನೇಜಸ್ ಇದ್ದರು.

LEAVE A REPLY

Please enter your comment!
Please enter your name here