ಎ.2, 3: ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ- ಎ.2ರಂದು ಹೊರೆಕಾಣಿಕೆ ಸಮರ್ಪಣೆ

0

ಪುತ್ತೂರು: ಶಾಂತಿಗೋಡು ಶ್ರೀವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಎ.2 ಮತ್ತು 3ರಂದು ನಡೆಯಲಿದೆ. ಎ.2ರಂದು ಬೆಳಿಗ್ಗೆ ಶ್ರೀವಿಷ್ಣುಮೂರ್ತಿ ಭಜನಾ ಮಂದಿರದಿಂದ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ರಾತ್ರಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಎ.3ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಪಂಚವಿಂಶತಿ, ಕಲಶಪೂಜೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ದೈವಗಳ ಭಂಡಾರ ತೆಗೆಯುವುದು, ರಾತ್ರಿ ಮಹಾಪೂಜೆ, ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈದಿಕ ಮಂತ್ರಾಕ್ಷತೆ, ಅನ್ನಸಂತರ್ಪಣೆ, ರಾತ್ರಿ ದೈವಗಳ ನೇಮೋತ್ಸವ, ರಕ್ತೇಶ್ವರಿ, ವ್ಯಾಘ್ರಚಾಮುಂಡಿ, ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಲಿದೆ. ಬೆಳಿಗ್ಗೆ ಮತ್ತು ಸಂಜೆ ಭಜನೆ ನಡೆಯಲಿದೆ.


ಸಾಂಸ್ಕೃತಿಕ ಕಾರ್ಯಕ್ರಮ :
ಎ.2ರಂದು ಸಂಜೆ ೮ರಿಂದ ವೀರಮಂಗಲ ಪಿ.ಎಂ.ಶ್ರೀ ಸರಕಾರಿ ಹಿ.ಪ್ರಾ ಶಾಲಾ ಬಾಲಕಲಾವಿದರಿಂದ ಯಕ್ಷಗಾನ ಬಯಲಾಟ- ಸುದರ್ಶನ ವಿಜಯ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಶಾಂತಿಗೋಡು ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಹೊನ್ನಪ್ಪ ಗೌಡ ಕೈಂದಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here