ಬಿಜೆಪಿ ಪುತ್ತೂರು ನಗರ ಮಂಡಲದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

0

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ನಗರ ಮಂಡಲದ‌ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ನೆಲಪ್ಪಾಲಿನ ಬೂತ್ ಸಂಖ್ಯೆ 63 ರಲ್ಲಿ ಚಾಲನೆ ನೀಡಲಾಯಿತು.


ನೆಲಪ್ಪಾಲು ಆಂಜನೇಯ ಕ್ಷೇತ್ರದ ಸನ್ನಿಧಿಯಲ್ಲಿ ಮಾಜಿ‌ ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿ ಮಾತನಾಡಿ ಏ. 2ರಂದು ನಡೆಯುವ ಕಾರ್ಯಕರ್ತರ ಸಮಾವೇಶದ ಮಾಹಿತಿ ನೀಡಿದರು. ಬಿಜೆಪಿ ಮಂಗಳೂರು ವಿಭಾಗದ ಸಹ ಪ್ರಭಾರಿಗಳಾದ ಗೋಪಾಲಕೃಷ್ಣ ಹೇರಳೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ ಪೆರಿಯತ್ತೋಡಿ, ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಕೆ ಜೀವಂದರ್ ಜೈನ್ , ಬೂತ್ ಅಧ್ಯಕ್ಷರಾದ ನಿತೇಶ್ ಹಾಗೂ ವಾರ್ಡ್ ನ ಪ್ರಮುಖರು, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here