ಆರ್ಯಾಪು ಗ್ರಾ.ಪಂ ಮಾಜಿ ಉಪಾಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಮೊಯಿದ್ದೀನ್ ಕುಂಞಿ ಕೊಪ್ಪಳ ನಿಧನ

0

ಪುತ್ತೂರು: ಆರ್ಯಾಪು ಗ್ರಾಮದ ಒಳತಡ್ಕ ಸಮೀಪದ ಕೊಪ್ಪಳ ನಿವಾಸಿ ಹಿರಿಯ ಕಾಂಗ್ರೆಸ್ ಮುಖಂಡ ಮೊಯಿದ್ದೀನ್ ಕುಂಞ ಯಾನೆ ಮೋನುಚ್ಚ(75) ಅವರು ಮಾ.31ರಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿರುವ ಮೊಯಿದ್ದೀನ್ ಕುಂಞ ಅವರು ಅರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾಗಿ, ಪಂಚಾಯತ್ ಉಪಾಧ್ಯಕ್ಷರಾಗಿದ್ದರು. ಅಲ್ಲದೇ ಒಳತ್ತಡ್ಕ ಮಸೀದಿಯ ಜಮಾಅತ್ ಕಮಿಟಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಇವರು ಸಮಾಜದ ಎಲ್ಲಾ ವರ್ಗದವರೊಂದಿಗೂ ಒಳ್ಳೆಯ ಭಾಂದವ್ಯ ಇಟ್ಟುಕೊಂಡವರಾಗಿದ್ದರು.
ಮೃತರು ಪತ್ನಿ, ನಾಲ್ಕು ಮಂದಿ ಪುತ್ರರು, ಐದು ಮಂದಿ ಪುತ್ರಿಯರನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವಾರು ಗಣ್ಯರು ಭೇಟಿ ನೀಡಿದರು.

LEAVE A REPLY

Please enter your comment!
Please enter your name here