ಎ.9-17: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅರ್ಧ ಏಕಾಹ ಭಜನೆ, ಸತ್ಯನಾರಾಯಣ ಪೂಜೆ, ಪ್ರತಿಷ್ಠಾ ವಾರ್ಷಿಕೋತ್ಸವ-ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಸರ್ವೆ ಗ್ರಾಮದ ಭಕ್ತಕೋಡಿ ಶ್ರೀ ರಾಮ ಭಜನಾ ಮಂದಿರದ 72ನೇ ವರ್ಷದ ಅರ್ಧ ಏಕಾಹ ಭಜನಾ ಕಾರ್ಯಕ್ರಮ, 18ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ 15ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಮಂದಿರದ ಕಛೇರಿಯಲ್ಲಿ ನಡೆಯಿತು.

ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ರಾಜೇಶ್ ಆಲೇಕಿ ಸರ್ವೆದೋಳಗುತ್ತು, ಪ್ರ.ಕಾರ್ಯದರ್ಶಿ ಲಕ್ಷ್ಮಣ ಆಚಾರ್ಯ ಭಕ್ತಕೋಡಿ, ಉಪಾಧ್ಯಕ್ಷ ಜನಾರ್ಧನ ಗೌಡ ಭಕ್ತಕೋಡಿ, ಪದಾಧಿಕಾರಿಗಳಾದ ರಾಮಣ್ಣ ಶೆಟ್ಟಿ ಬೊಟ್ಯಾಡಿಗುತ್ತು, ಶಶಿಧರ್ ಸರ್ವೆದೋಳಗುತ್ತು, ಉಮಾವತಿ ಜಯರಾಜ್ ಸುವರ್ಣ ಸೊರಕೆ, ಯೋಗೀಶ್ ಮಡಿವಾಳ ಕಲ್ಪಣೆ, ತಿಲಕ್‌ರಾಜ್ ಕರಂಬಾರು, ಕಮಲೇಶ್ ಸರ್ವೆದೋಳಗುತ್ತು, ರಾಮನವಮಿಯ ಭಜನಾ ಕಾರ್ಯಕ್ರಮಗಳ ನಿರ್ವಾಹಕರಾದ ಜಯರಾಜ್ ಸುವರ್ಣ ಸೊರಕೆ, ಕಛೇರಿ ನಿರ್ವಾಹಕರಾದ ಉಮೇಶ್ ಸರ್ವೆದೋಳಗುತ್ತು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here