ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ಜಾತ್ರೋತ್ಸವ-ದರ್ಶನ ಬಲಿ

0

ರಾಮಕುಂಜ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಅಂಗವಾಗಿ ಮಾ.31ರಂದು ಬೆಳಿಗ್ಗೆ ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.


ಬೆಳಿಗ್ಗೆ ದೇವರ ಬಲಿ ಹೊರಟು ಉತ್ಸವ ಆರಂಭವಾಯಿತು. ಮಧ್ಯಾಹ್ನ ದರ್ಶನ ಬಲಿ, ದೇವರ ಬಂಡಿರಥ, ಬಟ್ಟಲು ಕಾಣಿಕೆ, ಮಹಾಪೂಜೆ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ ದೇವರ ಬಲಿ ಹೊರಟು ಉತ್ಸವ, ಆನೆಗುಂಡಿಯವರೆಗೆ ಪೇಟೆ ಸವಾರಿ, ಆನೆಗುಂಡಿಯಲ್ಲಿ ಕೆರೆ ಉತ್ಸವ, ಕಟ್ಟೆಪೂಜೆ, ಆನೆಗುಂಡಿ ಬೂಡಿನಿಂದ ದುಗಲಾಯಿ ದೈವದ ಭಂಡಾರ ತರುವುದು, ದೇವಸ್ಥಾನದಲ್ಲಿ ರಂಗಪೂಜೆ ನಡೆಯಿತು. ಉತ್ಸವ ಸಮಿತಿ ಅಧ್ಯಕ್ಷ ಯದುಶ್ರೀ ಆನೆಗುಂಡಿ, ಉಪಾಧ್ಯಕ್ಷರಾದ ಧರ್ಣಪ್ಪ ಗೌಡ ಕೊರಿಕ್ಕಾರು, ಪಾಂಡೇಲುಗುತ್ತು ಚಂದ್ರಹಾಸ ರೈ ಬುಡಲೂರು, ಮೋಹನದಾಸ ಶೆಟ್ಟಿ ಬಡಿಲ, ರಾಮಚಂದ್ರ ಏಣಿತ್ತಡ್ಕ, ರಾಜೀವ ಗೌಡ ಪೊಸಲಕ್ಕೆ, ರುಕ್ಮಯ ಪಲ್ಲಡ್ಕ, ದಾಮಣ್ಣ ಗೌಡ ಕಾಯರಟ್ಟ, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅಂಬಾ, ಕಾರ್ಯದರ್ಶಿಗಳಾದ ಶಾಂತರಾಮ ಬೇಂಗದಪಡ್ಪು, ಮದುಸೂದನ್ ಪೆರ್ಲ, ತಿಮ್ಮಪ್ಪ ಸಂಕೇಶ, ಸದಸ್ಯರಾದ ಬಾಲಕೃಷ್ಣ ನಾಯ್ಕ ಏಣಿತ್ತಡ್ಕ, ವನಜ ಪಲ್ಲಡ್ಕ, ಮೋಹಿನಿ ಪಾನ್ಯೇಲು, ಮುರಳಿಕೃಷ್ಣ ಕೆ.ಬಡಿಲ, ವಿನಯಕುಮಾರ್ ರೈ ಕೊಯಿಲ ಪಟ್ಟೆ, ಶ್ರೀರಾಮ ಕೆಮ್ಮಾರ, ಸಂಜೀವ ಗೌಡ ಕೊನೆಮಜಲು, ಅಭಿವೃದ್ಧಿ ಸಮಿತಿ ಸಲಹೆಗಾರರಾದ ಕೇಶವ ಅಮೈ ಕಲಾಯಿಗುತ್ತು, ಅಧ್ಯಕ್ಷ ಶೀನಪ್ಪ ಗೌಡ ವಳಕಡಮ, ಪ್ರಧಾನ ಕಾರ್ಯದರ್ಶಿ ಚೇತನ್ ಆನೆಗುಂಡಿ, ಉಪಾಧ್ಯಕ್ಷರಾದ ಜಗನ್ನಾಥ ಶೆಟ್ಟಿ ಕಾರಗುಡ್ಡೆ, ಭವಾನಿಶಂಕರ್ ಪರಂಗಾಜೆ, ರಾಮ ನಾಯ್ಕ್ ಏಣಿತ್ತಡ್ಕ, ಬಾಲಕೃಷ್ಣ ಗೌಡ ಬೇಂಗದಪಡ್ಪು, ಕಾರ್ಯಕಾರಿ ಸಮಿತಿ ಸದಸ್ಯರಾದ ವಿನೋಧರ ಗೌಡ ಮಾಳ, ರಾಮಯ್ಯ ಗೌಡ ಬುಡಲೂರು, ಕೆ.ಎಸ್.ಬಾಲಕೃಷ್ಣ ಕೊಲ್ಯ, ಸುಭಾಸ್ ಶೆಟ್ಟಿ ಆರುವಾರ, ಸುಧೀಶ ಪಟ್ಟೆ ಪಲ್ಲಡ್ಕ, ದಿನೇಶ್ ಗೌಡ ಊರಾಜೆ, ಸುಂದರ ಕೋರಿಕ್ಕಾರು, ಲಕ್ಷ್ಮೀನಾರಾಯಣ ರಾವ್ ಆತೂರು, ಅಶೋಕ್ ಗೋಕುಲನಗರ, ಜೊತೆ ಕಾರ್ಯದರ್ಶಿಗಳಾದ ಉಮೇಶ್ ಸಂಕೇಶ, ಶಾಂತರಾಮ್ ಬೇಂಗದಪಡ್ಪು, ಹರೀಂದ್ರ ಊರಾಜೆ, ಸಚಿನ್ ಪಲ್ಲಡ್ಕ ಪಟ್ಟೆ, ಬೈಲುವಾರು ಸಮಿತಿ ಗ್ರಾಮ ಸಂಚಾಲಕರಾದ ಭವಿತ್‌ರಾಜ್ ಪಲ್ಲಡ್ಕ ಪಟ್ಟೆ, ಪ್ರವೀಣ್‌ರಾಜ್ ಕೆ.ಎಸ್.ಕೊಲ್ಯ, ಬೈಲುವಾರು ಸಮಿತಿ ಸಂಚಾಲಕರು, ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.


ಸಾಂಸ್ಕೃತಿಕ ಕಾರ್ಯಕ್ರಮ:
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಯಕ್ಷನಂದನ ಕಲಾಸಂಘ ಗೋಕುಲನಗರ ಇವರ ಪ್ರಾಯೋಜಕತ್ವದಲ್ಲಿ ’ ಭೂ ಕೈಲಾಸ’ ಯಕ್ಷಗಾನ ತಾಳಮದ್ದಳೆ ನಡೆಯಿತು. ರಾತ್ರಿ ಶಿವಮೂರ್ತಿ ಮಿತ್ರವೃಂದ ಕೊಯಿಲ ಇವರ ಪ್ರಾಯೋಜಕತ್ವದಲ್ಲಿ 12ನೇ ವರ್ಷದ ಕಲಾಸೇವೆಯ ಪ್ರಯುಕ್ತ’ ಗರುಡ ಪಂಚಮಿ’ತುಳು ನಾಟಕ ಪ್ರದರ್ಶನಗೊಂಡಿತು.

ಇಂದು ಮಹಾರಥೋತ್ಸವ:
ಎ.1ರಂದು ಬೆಳಿಗ್ಗೆ ಬಲಿಹೊರಟು ಉತ್ಸವ ನಡೆಯಲಿದೆ. ರಾತ್ರಿ 7ರಿಂದ ಬಲಿ ಹೊರಟು, ರಕ್ತೇಶ್ವರಿ ಮತ್ತು ಹುಲಿ ದೈವಗಳ ನುಡಿಕಟ್ಟುಗಳು, ರಾತ್ರಿ 9ರಿಂದ ಮಹಾರಥೋತ್ಸವ, ಬಳಿಕ ಅಶ್ವತ್ಥ ಕಟ್ಟೆಪೂಜೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಜೆ 6ರಿಂದ ದೇವಗಿರಿ ಬಾಲಗೋಕುಲದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 10ರಿಂದ ’ಮಾಯದ ದೃಷ್ಟಿ’ ಯಕ್ಷಗಾನ ಬಯಲಾಟ ನಡೆಯಲಿದೆ.

LEAVE A REPLY

Please enter your comment!
Please enter your name here