ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಎ.7ರಿಂದ 9 ತನಕ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಎ.1ರಂದು ಗೊನೆ ಮುಹೂರ್ತ ನೆರವೇರಿತು.


ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಸ್ಥಾನದ ಬಳಿಯ ತೋಟದಲ್ಲಿ ಗೊನೆ ಕಡಿಯಲಾಯಿತು. ದೇವಸ್ಥಾನದ ಉಮಾಮಹೇಶ್ವರ ಸೇವಾ ಟ್ರಸ್ಟ್ ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿ, ಉಪಾಧ್ಯಕ್ಷ ಬೆಳಿಯಪ್ಪ ಗೌಡ ಕದ್ಕಾರ್, ಕಾರ್ಯದರ್ಶಿ ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ ಗಿರೀಶ್ ರೈ ಮಣಿಯ, ರವಿ ಮಣಿಯ, ಸುಧೀರ್ ಹೆಬ್ಬಾರ್ ಮಣಿಯ, ಪದ್ಮನಾಭ ಪೂಜಾರಿ ಬೆದ್ರಾಳ, ಮೋನಪ್ಪ ಪುರುಷ ಮುಗೇರಡ್ಕ, ಗಣೇಶ್ ಶೆಟ್ಟಿ ಶಿಬರ, ಅರ್ಚಕ ಪ್ರಸಾದ ಅಡಿಗ, ನರಿಮೊಗರು ಗ್ರಾ.ಪಂ ಸದಸ್ಯ ಸುಧಾಕರ ಕುಲಾಲ್ ನಡುವಾಲ್, ಭಜನಾ ಮಂಡಳಿ ಅಧ್ಯಕ್ಷ ಪ್ರವೀಣ್ ಕುಲಾಲ್, ಮಂಜುನಾಥ ಶೇಖ, ರಮೇಶ್, ದೇವಸ್ಥಾನದ ಸಿಬಂದಿ ಈಶ್ವರ ಸೇರಿಗಾರ, ರಾಘವೇಂದ್ರ ನಾಯಕ್, ಸಂತೋಷ್, ಗಣೇಶ್ ಸೇರಿದಂತೆ ಹಲವು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here