ಪುಣಚ ಶ್ರೀದೇವಿ ಪ್ರೌಢ ಶಾಲೆಯಲ್ಲಿ ಮಕ್ಕಳ ಸಂಭ್ರಮ, ಬೇಸಿಗೆ ಶಿಬಿರ ಉದ್ಘಾಟನೆ

0

ಪುಣಚ: ಪುಣಚ ಶ್ರೀದೇವಿ ಪ್ರೌಢ ಶಾಲೆಯಲ್ಲಿ ಮಕ್ಕಳ ಸಂಭ್ರಮ, ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಎ.1ರಂದು ಅಮೃತ ಭಾರತಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಕಲಾತಪಸ್ವಿ ಬಿರುದಾಂಕಿತ ನಟ, ನಿರ್ದೇಶಕ ಹಾಗೂ ನಾಟಕ ರಚನಾಕಾರ ರವಿಶಂಕರ್ ಶಾಸ್ತ್ರಿ ಮಣಿಲ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ಜಯಶ್ರೀ ಇಡ್ಕಿದು, ಶಾಲಾ ನಿವೃತ್ತ ಮುಖ್ಯ ಗುರು, ಆಡಳಿತ ಮಂಡಳಿಯ ಕೋಶಾಧಿಕಾರಿ ರಾಮಚಂದ್ರ ಭಟ್ ಶುಭ ಹಾರೈಸಿದರು. ಆಡಳಿತ ಮಂಡಳಿಯ ಸದಸ್ಯೆ, ನಿವೃತ್ತ ಮುಖ್ಯ ಗುರು ಗಂಗಮ್ಮ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಸರಸ್ವತಿ ವಂದಿಸಿದರು. ಶಿಕ್ಷಕಿ ಚಿತ್ರ ಕಾರ್ಯಕ್ರಮ ನಿರೂಪಿಸಿದರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಎ.1ರಿಂದ ಎ.6ವರೆಗೆ 6ದಿನಗಳ ಕಾಲ ಶಿಬಿರವನ್ನು ಅಯೋಜಿಸಲಾಗಿದ್ದು ಶಿಬಿರದಲ್ಲಿ ರಂಗ ತರಬೇತಿ, ಕರಕುಶಲ ವಸ್ತುಗಳ ತಯಾರಿ, ಚಿತ್ರಕಲೆ, ಸಾಬೂನು ತಯಾರಿ, ಮನೆಮದ್ದುಗಳ ಬಗ್ಗೆ ಮಾಹಿತಿ, ಖಾದ್ಯ ತಿನಿಸುಗಳ ತಯಾರಿ, ಹೊರ ಸಂಚಾರ ಸಾಧಕರೊಂದಗೆ ಸಂವಾದ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here