ಆರ್ಯಾಪು ಪ್ರಾ.ಕೃ.ಪ.ಸ ಸಂಘದ ನಿವೃತ್ತ ಸಿಬ್ಬಂದಿ ರಾಜೇಶ್ ಕುಮಾರ್‌ಗೆ ಬೀಳ್ಕೊಡುಗೆ ಸಮಾರಂಭ

0

ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗುಮಾಸ್ತರಾಗಿದ್ದ ರಾಜೇಶ್ ಕುಮಾರ್‌ರವರು ಮಾ.31ಕ್ಕೆ ಸೇವೆಯಿಂದ ನಿವೃತ್ತಿ ಹೊಂದಿದ್ದು, ಇವರಿಗೆ ಸಹಕಾರಿ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಆರ್ಯಾಪು ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಸಮಾರಂಭದಲ್ಲಿ ಕಳೆದ 23 ವರ್ಷಗಳಿಂದ ಸಹಕಾರಿ ಸಂಘದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ರಾಜೇಶ್ ಕುಮಾರ್ ರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಮಾರಂಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುರೇಂದ್ರ ರೈ ಬಳ್ಳಮಜಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್, ನಿರ್ದೇಶಕರುಗಳಾದ ಸದಾನಂದ ಶೆಟ್ಟಿ ಕೂರೇಲು, ಗಣೇಶ್ ರೈ ತೊಟ್ಲ, ಗಣೇಶ್ ರೈ ಕುರಿಯ, ಇಸ್ಮಾಯಿಲ್ ಮಲಾರು, ಸಂಶುದ್ದೀನ್ ನೀರ್ಕಜೆ, ಶೀನಪ್ಪ ಮರಿಕೆ, ತಿಮ್ಮಪ್ಪ ನಾಯ್ಕ ಜಂಗಮುಗೇರು, ಕೇಂದ್ರ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕರಾದ ಶರತ್ ಡಿ, ನವೋದಯ ಪ್ರೇರಕಿ ಮೋಹಿನಿ, ಸಂಘದ ವ್ಯವಸ್ಥಾಪಕರಾದ ಅಜಿತ್ ಕುಮಾರ್ ರೈ, ಶಾಖಾ ವ್ಯವಸ್ಥಾಪಕರಾದ ಸುಭಾಷಿನಿ ವಿ ರೈ, ಸಿಬ್ಬಂದಿಗಳಾದ ವಿನಯ ಕುಮಾರ್ ರೈ, ಅರ್ಜುನ್ ಭಾಸ್ಕರ್, ಪ್ರಶಾಂತಿ ಹಾಗೂ ಸಂಘದ ಸದಸ್ಯರಾದ ಮುರಳೀಧರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಉಮೇಶ್ ಎಸ್.ಕೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here