ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ-ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು

0

ವಿಟ್ಲ :ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ವ್ಯಕ್ತಿಯೋರ್ವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು, ಏ.1ರಂದು ರಾತ್ರಿ, ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಸಾರ್ವಜನಿಕ ರಸ್ತೆಯಲ್ಲಿ ನವೀನ ಶೆಟ್ಟಿಯವರು, ಕೊರಗಪ್ಪ ಮತ್ತು ಸುಂದರ ಎಂಬವರೊಂದಿಗೆ ಮಾತನಾಡುತ್ತಿರುವ ಸಂದರ್ಭದಲ್ಲಿ ಆರೋಪಿ ವಸಂತ ಎಂಬಾತನು ಬಂದು ನವೀನ ಶೆಟ್ಟಿಯವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ನವೀನ ಶೆಟ್ಟಿಯವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಸಂತ ಪೂಜಾರಿ ಪ್ರತಿದೂರು ನೀಡಿದ್ದು, ದೂರಿನಲ್ಲಿ ಏ.1ರಂದು ‌ಸಂಜೆ ನವೀನ್ ಶೆಟ್ಟಿ ಮನೆಯ ಬಳಿ ಬಂದು ನೀರಿನ ಸಂಪರ್ಕ ಪಡೆಯುವ ವಿಚಾರದಲ್ಲಿ ಅವಾಚ್ಯವಾಗಿ ಬೈದು ಹೋಗಿರುತ್ತಾರೆ. ಪ್ರಕರಣ ಮುಂದುವರಿದಂತೆ ಏ.2ರಂದು ಮುಂಜಾನೆ ನವೀನ್ ಶೆಟ್ಟಿ ಮಗ ಪ್ರವೀಣ್ ಶೆಟ್ಟಿ ಮನೆಗೆ ಅಕ್ರಮವಾಗಿ ಒಳಪ್ರವೇಶಿಸಿ ಹಲ್ಲೆ ನಡೆಸಿದ್ದು, ಈ ವೇಳೆ ಪತ್ನಿ ತಡೆಯಲು ಬಂದಾಗ, ಆಕೆಗೂ ಹಲ್ಲೆ ನಡೆಸಿ, ಅನುಚಿತವಾಗಿ ವರ್ತಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರತಿದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here