ನಾಣಿಲ ಶಾಲೆಗೆ ಬೆಳಂದೂರು ಪ್ರಥಮ ದರ್ಜೆ ಕಾಲೇಜಿನಿಂದ ಮಾತಿನ ಮಂಟಪ ಕೊಡುಗೆ

0

ಕಾಣಿಯೂರು: ನಾಣಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಾಷ್ಟ್ರೀಯ ಸೇವಾ ಯೋಜನೆಯ ಸವಿ ನೆನಪಿಗಾಗಿ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಮಾತಿನ ಮಂಟಪವನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬೆಳಂದೂರು ಸ.ಪ್ರ.ದ ಕಾಲೇಜಿನ ಪ್ರಾಂಶುಪಾಲ ಡಾ. ಶಂಕರ್ ಭಟ್ ಪಿ, ಕಾಲೇಜಿನ ಸಹ ಪ್ರಾಧ್ಯಾಪಕ ಕಾಂತರಾಜು, ಬೆಳ್ಳಾರೆ, ನಾಣಿಲ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ, ಮುಖ್ಯಗುರು ಪದ್ಮಯ್ಯ ಗೌಡ, ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ ವೆಂಕಟೇಶ್ ಭಟ್, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ವಿಠಲ ಗೌಡ ಅಗಳಿ, ಅಂಬುಲ ಅಶ್ವಿನಿ ಫಾರ್ಮ್ ನ ಕುಮಾರಸ್ವಾಮಿ ಭಟ್, ಕಾಲೇಜಿನ ಎನ್ ಎಸ್ ಎಸ್ ನ ಅಧಿಕಾರಿ ವರ್ಗ, ಶಿಬಿರಾರ್ಥಿಗಳು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಹಾಲಾ ಶಿಕ್ಷಕ ವೃಂದ, ಶಾಲಾ ವಿದ್ಯಾರ್ಥಿಗಳು ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here