ಆಲಂಕಾರು ಪೇಟೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

0

ಆಲಂಕಾರು: ಲೋಕ ಸಭಾ ಚುನಾವಣೆಯ ಹಿನ್ನಲೆ ಯಲ್ಲಿ ಆಲಂಕಾರು ಗ್ರಾ.ಪಂ ,ತಾ.ಪಂ ವತಿಯಿಂದ ಆಲಂಕಾರು ಪೇಟೆಯ ಬಸ್ ನಿಲ್ದಾಣದಲ್ಲಿ ತಾಲೂಕು ಎಸ್ ವಿ ಇ ಇ ಪಿ ಸಮಿತಿ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಅಂಗವಾಗಿ ನೇಸರ ಕಲಾವಿದರು ಮೆಟ್ಟಿನಡ್ಕ ಗುತ್ತಿಗಾರು ಇವರಿಂದ ಜಾನಪದ ಗೀತೆಗಳ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಜಾಥ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿ ಜಯಣ್ಣ ಬಿ. ವಿ. ಆಲಂಕಾರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಸುಜಾತ ಕೆ, ಕಾರ್ಯದರ್ಶಿ ವಸಂತ .ಕೆ ತಾಲೂಕು ಪಂಚಾಯತ್ ಸಿಬ್ಬಂದಿ ವೆಂಕಟರಮಣ , ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್‌ , ದುರ್ಗಾಂಬ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಧ್ಯಾಪಕರು ಆಲಂಕಾರು ಗ್ರಾ.ಪಂ ಸದಸ್ಯರಾದ ಶಾರದ , ವಾರಿಜ ಕೆ ಸಿ, ಮತ್ತು ಪಂಚಾಯತ್ ಸಿಬ್ಬಂದಿಗಳು , ಬಿ.ಎಲ್. ಒ ಗಳು ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು , ಆಟೋಚಾಲಕ ಮಾಲಕ ಸಂಘದ ಅಧ್ಯಕ್ಷರು , ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here