ನೆಲ್ಯಾಡಿ: ವಾಲಿಬಾಲ್ ತರಬೇತಿ ಶಿಬಿರ

0

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ಸಹಯೋಗದಲ್ಲಿ ವಾಲಿಬಾಲ್ ತರಬೇತಿ ಶಿಬಿರ ಪಿಎಂಶ್ರೀ ನೆಲ್ಯಾಡಿ ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಸುಚಿತ್ರಾ ಜೆ.ಬಂಟ್ರಿಯಾಲ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಈ ಶಿಬಿರವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಬೆಳೆದು ಮುಂದಿನ ಕ್ರೀಡಾಕೂಟದಲ್ಲಿ ತಮ್ಮ ಕ್ರೀಡಾ ಸಾಮರ್ಥ್ಯವನ್ನು ತೋರಿಸಬೇಕೆಂದು ಹೇಳಿದರು. ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ವೀಣಾ ಮಸ್ಕರೇನಸ್ ವಹಿಸಿದ್ದರು. ವೇದಿಕೆಯಲ್ಲಿ ಕ್ರೀಡಾ ತರಬೇತುದಾರ ನಿವೃತ್ತ ದೈಹಿಕ ಶಿಕ್ಷಕ ಜನಾರ್ದನ.ಟಿ, ಹಿರಿಯ ಸಹಶಿಕ್ಷಕಿ ಜಯಂತಿ, ಮೇರಿ ಜಾನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಧೃತಿ ವಂದಿಸಿದರು. ಶಿಕ್ಷಕ ವಿಮಲ್ ಕುಮಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here