ಬೆಳ್ಳಿಪ್ಪಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಒಂದು ದಿನದ ಬೇಸಿಗೆ ಶಿಬಿರ ಕಾರ್ಯಕ್ರಮ

0

ಪುತ್ತೂರು:ಪುತ್ತೂರು ಸಂತ ಫಿಲೋಮಿನ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಿಪ್ಪಾಡಿ ಇದರ ಜಂಟಿ ಆಶ್ರಯದಲ್ಲಿ ಒಂದು ದಿನದ ಬೇಸಿಗೆ ಶಿಬಿರ ಕಾರ್ಯಕ್ರಮವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಿಪ್ಪಾಡಿಯಲ್ಲಿ ಉದ್ಘಾಟನೆಗೊಂಡಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಭವ್ಯ ವಿ ಶೆಟ್ಟಿ ವಹಿಸಿದರು.ಸತ್ಯ ಮೂರ್ತಿ ಹೆಬ್ಬಾರ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವೇದಿಕೆಯಲ್ಲಿ ಸಂತ ಫಿಲೋಮಿನ ಕಾಲೇಜ್ ಪುತ್ತೂರು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಉಪನ್ಯಾಸಕಿ ಶ್ರೀಮಣಿ, ಬೆಳ್ಳಿಪ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಯಶೋದ ಎನ್ ಎಂ ಉಪಸ್ಥಿತರಿದ್ದರು.


ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಾದ ಮನೋಜ್ ಕುಮಾರ್ ಸ್ವಾಗತಿಸಿ, ನಕುಲ್ ಪ್ರಧಾನ್ ಕಾರ್ಯಕ್ರಮ ಪರಿಚಯಿಸಿ, ವಿನುತಾ ಬಿ ವಂದಿಸಿದರು. ಹಾಗೂ ಜಯ ಶ್ರೀ ಕಾರ್ಯಕ್ರಮ ನಿರೂಪಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಿಪ್ಪಾಡಿಯ ವಿದ್ಯಾರ್ಥಿಗಳು ಈ ಒಂದು ದಿನದ ಬೇಸಿಗೆ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

LEAVE A REPLY

Please enter your comment!
Please enter your name here