ಪುತ್ತೂರು ವಕೀಲರ ಸಂಘದ ಆಡಳಿತ ಮಂಡಳಿ ನಾಲ್ಕು ಸ್ಥಾನಗಳಿಗೆ ಏ.6ರಂದು ಚುನಾವಣೆ

0

ಪುತ್ತೂರು:ಪ್ರತಿಷ್ಠಿತ ಪುತ್ತೂರು ವಕೀಲರ ಸಂಘದ 2024-25ರಿಂದ 2025-26ರ ಸಾಲಿನ 2 ವರ್ಷಗಳ ಅವಧಿಗೆ ನೂತನ ಆಡಳಿತ ಮಂಡಳಿಯ ನಾಲ್ಕು ಸ್ಥಾನಗಳಿಗೆ ಏ.6ರಂದು ಚುನಾವಣೆ ನಡೆಯಲಿದೆ.ನಾಮಪತ್ರ ಹಿಂಪಡೆಯಲು ಏ.2ರಂದು ಕೊನೆ ದಿನವಾಗಿದ್ದರೂ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯದೇ ಇರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.ಕಾರ್ಯದರ್ಶಿ ಸ್ಥಾನಕ್ಕೆ ಚಿನ್ಮಯ್ ರೈ ಈಶ್ವರಮಂಗಲ ಅವರೋರ್ವರೇ ನಾಮಪತ್ರ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.


ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಕಜೆ, ಜಿ.ಜಗನ್ನಾಥ ರೈ, ಸಂತೋಷ್ ಕುಮಾರ್ ಎಂ, ಉಪಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ ನಂದಿಲ, ಮೋನಪ್ಪ ಎಂ.ಅಳಿಕೆ, ಜತೆ ಕಾರ್ಯದರ್ಶಿ ಸ್ಥಾನಕ್ಕೆ ಹೀರಾ ಉದಯ್, ಮಮತಾ ಸುವರ್ಣ ಬಿ ಹಾಗೂ ಕೋಶಾಧಿಕಾರಿ ಸ್ಥಾನಕ್ಕೆ ಮಹೇಶ್ ಕೆ. ಸವಣೂರು ಮತ್ತು ಚಿದಾನಂದ ರೈ. ಕೊಡಿಂಬಾಡಿ ಅವರು ಚುನಾವಣಾ ಕಣದಲ್ಲಿದ್ದಾರೆ. ಚುನಾವಣಾಽಕಾರಿಗಳಾಗಿ ಕೆ.ಭಾಸ್ಕರ್ ಕೋಡಿಂಬಾಳ, ಎನ್.ಕಿಶೋರ್ ಕೊಳತ್ತಾಯ, ದೀಪಕ್ ಬೊಳುವಾರು ಕಾರ್ಯನಿರ್ವಹಿಸುತ್ತಿದ್ದಾರೆ.ಮತದಾನವು ವಕೀಲರ ಸಂಘದ ಪರಾಶರ ಸಭಾಭವನದಲ್ಲಿ ಬೆಳಿಗ್ಗೆ ಗಂಟೆ 10 ರಿಂದ ಸಂಜೆ ಗಂಟೆ 4ರ ತನಕ ನಡೆಯಲಿದೆ. ಅದೇ ದಿನ ಸಂಜೆ ಗಂಟೆ 4 ರಿಂದ ಮತ ಎಣಿಕೆಯು ನಡೆಯಲಿದೆ.

LEAVE A REPLY

Please enter your comment!
Please enter your name here