ಎ.5: ದೊಡ್ಡಡ್ಕ ಶ್ರೀ ಮಹಾಲಕ್ಷ್ಮೀ ಭಜನಾ ಮಂದಿರದ 31ನೇ ವಾರ್ಷಿಕೋತ್ಸವ

0

ಪುತ್ತೂರು: ಆರ್ಯಾಪು ದೊಡ್ಡಡ್ಕ ಶ್ರೀ ಮಹಾಲಕ್ಷ್ಮೀ ಭಜನಾ ಮಂದಿರದ 31ನೇ ವಾರ್ಷಿಕೋತ್ಸವ ಎ.5ರಂದು ನಡೆಯಲಿದೆ. ಬೆಳಿಗ್ಗೆ ಗಣಪತಿ ಹೋಮ, ಸಾರ್ವಜನಿಕ ಶ್ರೀ ಮಹಾಲಕ್ಷ್ಮೀ ಪೂಜೆ, ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಭಜನಾ ಕಾರ್ಯಕ್ರಮ, ಸಂಜೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ತೆಂಕಿಲ ವಿವೇಕನಗರ ವಿವೇಕಾನಂದ ಆಂ.ಮಾ ಶಾಲೆಯ ಸಂಚಾಲಕ ರವಿನಾರಾಯಣ ಎಂ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮಾಧವ ಗೌಡ ಕಾಂತಿಲ, ಪಿಡಬ್ಲ್ಯೂಡಿ ಕಂಟ್ರಾಕ್ಟರ್ ನಾರಾಯಣ ನಾಯ್ಕ ಗೆಣಸಿನಕುಮೇರು ಭಾಗವಹಿಸಲಿದ್ದಾರೆ. ರಾತ್ರಿ 8ರಿಂದ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿಯವರಿಂದ ಯಕ್ಷಗಾನ ಬಯಲಾಟ ಸಂಪೂರ್ಣ ನಳದಮಯಂತಿ ನಡೆಯಲಿದೆ.

LEAVE A REPLY

Please enter your comment!
Please enter your name here