ಪುದುವೆಟ್ಟು:ಪೈಪ್ ಲೈನ್ ಕೊರೆದು ಡೀಸೆಲ್ ಕಳವು ಪ್ರಕರಣನೆಲ್ಯಾಡಿ,ಕಡಬದ ಇಬ್ಬರ ಸಹಿತ ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

0

ಪುತ್ತೂರು:ಬೆಳ್ತಂಗಡಿ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡೀಸೆಲ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನೆಲ್ಯಾಡಿ,ಕಡಬ ನಿವಾಸಿಗಳಿಬ್ಬರ ಸಹಿತ ಬಂಧಿತರಾಗಿದ್ದ  ಐವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ನಿವಾಸಿ ಜಯ ಸುವರ್ಣ (39ವ.),ಕಡಬ ತಾಲೂಕು ಕಡಬ ಗ್ರಾಮದ ಕಾರ್ತಿಕ್(28ವ.),ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್ ಗೌಡ(40ವ.),ಪುದುವೆಟ್ಟು ಗ್ರಾಮದ ಮೋಹನ್ (28ವ.) ಮತ್ತು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹರೆಹಳ್ಳಿಯ ನಿವಾಸಿ ದಿನೇಶ್ (40ವ.)ಬಂಧಿತರಾಗಿ ಜೈಲು ಸೇರಿದ್ದಾರೆ.ಆರೋಪಿಗಳನ್ನು ಪೊಲೀಸರು  ನೆಲ್ಯಾಡಿಯಲ್ಲಿ ವಶಕ್ಕೆ ಪಡೆದು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿದ್ದರು.ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು.ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗಿರುವುದರಿಂದ ಏ.4ರಂದು ಆರೋಪಿಗಳನ್ನು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿದ್ದು ಅರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣ:
ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡೀಸೆಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ ಮಾ.19ರ ರಾತ್ರಿಯ ಮಧ್ಯದ ಅವಧಿಯಲ್ಲಿ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ಯಾರೋ ಕಳ್ಳರು ಡೀಸೆಲ್ ಪೈಪ್ ಲೈನ್‌ನಲ್ಲಿ ರಂದ್ರ ಕೊರೆದು 2.5 ಇಂಚು ಹೆಚ್‌ಡಿಪಿಇ ಪೈಪ್ ಮೂಲಕ ಅಂದಾಜು 12,೦೦೦ ಲೀ. ಡೀಸೆಲ್ ಕಳವು ಮಾಡಿದ್ದರು.ಕಳವಾದ ಡೀಸೆಲ್‌ನ ಮೌಲ್ಯ ರೂ 9,60,೦೦೦ ಎಂದು ಅಂದಾಜಿಸಲಾಗಿದೆ.ಘಟನೆಯ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ (ಅ.ಕ್ರ : 19/2024) ಕಲಂ: 427,285,379 ಐಪಿಸಿ ಕಲಂ 15(2) ಪೆಟ್ರೋನೆಟ್ ಕಾಯ್ದೆ ಕಲಂ3(2) ಪ್ರಿವೆನ್ಶನ್ ಆಫ್ ಡ್ಯಾಮೆಜ್ ಟು ಪಬ್ಲಿಕ್ ಪ್ರಾಪರ್ಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು.ಕೃತ್ಯಕ್ಕೆ ಬಳಸಿದ ಮಾರುತಿ 800 ಕಾರು, 100 ಲೀಟರ್ ಡೀಸೆಲ್, ಪೈಪುಗಳು, ಡ್ರಿಲ್ಲಿಂಗ್ ಮೆಷಿನ್, ವೆಲ್ಡಿಂಗ್ ಮೆಷಿನ್, ಮೊಬೈಲ್ ಫೋನ್‌ಗಳನ್ನು ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದರು.ಬೆಳ್ತಂಗಡಿ ಸರ್ಕಲ್ ಪೊಲೀಸ್ ವೃತ್ತ ನಿರೀಕ್ಷಕ ವಸಂತ ಅಚಾರ್ ನೇತೃತ್ವದಲ್ಲಿ ಧರ್ಮಸ್ಥಳ ಠಾಣಾ ಸಬ್‌ಇನ್‌ಸ್ಪೆಕ್ಟರ್‌ಗಳಾದ ಅನಿಲ್ ಕುಮಾರ್, ಸಮರ್ಥ್ ಆರ್. ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here