ಕೈರಂಗಳ ದೇವಸ್ಥಾನದ ಜಾತ್ರೋತ್ಸವದಲ್ಲಿ ‘ನೃತ್ಯೋಹಂ’

0

ಪುತ್ತೂರು: ಬಂಟ್ವಾಳ ತಾಲೂಕಿನ ಮುಡಿಪು ಕೈರಂಗಳ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಸಲುವಾಗಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ
‘ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ ನಡೆಯಿತು.


ವಿದುಷಿ ಶಾಲಿನಿ ಆತ್ಮಭೂಷಣ್‌ ನೃತ್ಯ ನಿರ್ದೇಶನದಲ್ಲಿ ಕಲಾ ಅಕಾಡೆಮಿ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಿದರು. ಆಡಳಿತ ಮೊಕ್ತೇಸರ ತೋಡುಗುಳಿ ಮಹಾಬಲೇಶ್ವರ ಭಟ್‌ ಮತ್ತು ಕೈರಂಗಳ ಗೋಪಾಲಕೃಷ್ಣ ಭಟ್‌ ಕಲಾವಿದರನ್ನು ಗೌರವಿಸಿದರು.

LEAVE A REPLY

Please enter your comment!
Please enter your name here