ಲೋಕಸಭಾ ಚುನಾವಣೆ ಹಿನ್ನೆಲೆ -ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್‌ಗೆ ವರ್ಗಾವಣೆ

0

ಪುತ್ತೂರು: ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರಿಗೆ ಮುಳಬಾಗಿಲು ನಗರಸಭೆಗೆ ವರ್ಗಾವಣೆ ಆದೇಶ ಬಂದಿದೆ.
ಲೋಕಸಭೆ ಸಾರ್ವತ್ರಿಕ ಚುನಾವಣೆ -2024ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಒಂದೇ ಜಿಲ್ಲೆಯಲ್ಲಿ ಒಂದೇ ಲೋಕಸಭಾ ಮತಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರ ವರ್ಗಾವಣೆಗೆ ಸಂಬಂಧಿಸಿ ಈ ಪ್ರಕ್ರಿಯೆ ನಡೆದಿದೆ. ಮಧು ಎಸ್ ಮನೋಹರ್ ಅವರು ಮೂಲ ಹುದ್ದೆ ಸಹಾಯಕ ಕಾರ್ಯಪಾಲಕ ಅಭಿಯಂತರ ಪರಿಸರವಾಗಿದ್ದು, ಅವರನ್ನು ಮುಳಬಾಗಿಲು ನಗರಸಭೆಯಲ್ಲಿ ಖಾಲಿಯಿರುವ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಹುದ್ದೆಗೆ ವರ್ಗಾಯಿಸಲಾಗಿದೆ. ಮಧು ಎಸ್ ಮನೋಹರ್ ಅವರ ಸ್ಥಳಕ್ಕೆ ಹಾಲಿ ಸ್ಥಳ ನಿರೀಕ್ಷಣೆಯಲ್ಲಿದ್ದ ಪೌರಾಯುಕ್ತ ಶ್ರೇಣಿ -2ರ ಬದ್ರುದ್ದೀನ್ ಎ ಸೌಧಾಗರ್ ಅವರನ್ನು ಪುತ್ತೂರು ನಗರಸಭೆ ಪೌರಾಯುಕ್ತರನ್ನಾಗಿ ವರ್ಗಾಯಿಸಲಾಗಿದೆ.

LEAVE A REPLY

Please enter your comment!
Please enter your name here