ಎ.9: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

0

ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎ.9ರಂದು  ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೃಢಕಲಶಾಭಿಷೇಕ ನಡೆಯಲಿದೆ.

ದೇವಸ್ಥಾನದಲ್ಲಿ ಬೆಳಿಗ್ಗೆ 8.30ರಿಂದ ದೇವತಾ ಪ್ರಾರ್ಥನೆ,ಮಹಾಗಣಪತಿ ಹೋಮ ,ಕಲಶ ಪೂಜೆ, ಮಧ್ಯಾಹ್ನ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ ,ದೃಢಕಲಶಾಭಿಷೇಕ , ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ.

ದೇವಸ್ಥಾನದಲ್ಲಿ ಪ್ರತೀ ತಿಂಗಳ ಸಂಕಷ್ಟಿಯಂದು ಮಹಾಗಣಪತಿ ಹೋಮ ,ಸಂಕ್ರಮಣದಂದು ರಾತ್ರಿ ವಿಶೇಷ ರಂಗಪೂಜೆ, ಪ್ರತೀ ತಿಂಗಳ ಷಷ್ಟಿಯಂದು ಮಧ್ಯಾಹ್ನ ಷಷ್ಟಿ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.ಅಲ್ಲದೇ ಭಕ್ತಾದಿಗಳು ಇಚ್ಚಿಸಿದ ದಿನಗಳಲ್ಲಿ ಶ್ರೀ ದೇವರಿಗೆ ಕಾರ್ತಿಕ ಪೂಜೆ,ಶ್ರೀ ಸತ್ಯನಾರಾಯಣ ಪೂಜೆ,ಆಶ್ಲೇಷ ಬಲಿ ,ಶ್ರೀ ಶನೈಶ್ಚರ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದೆ.ಭಕ್ತಾದಿಗಳು ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್‌ ಕುಮಾರ್‌ ರೈ ನಳೀಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here