ಪುಣಚ ಮಹಿಷಮರ್ದಿನಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ – ಸಾಂಸ್ಕೃತಿಕ‌ ಕಾರ್ಯಕ್ರಮ-ಕಲಾವಿದರಿಗೆ ಸನ್ಮಾನ

0

ಪುಣಚ: ಪುಣಚ ಮಹಿಷಮರ್ದಿನಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು ಎ.8ರಂದು ರಾತ್ರಿ ಕಲ್ಪವೃಕ್ಷ ಫ್ರೆಂಡ್ಸ್‌ ಪುಣಚ ಇವರ ಪ್ರಾಯೋಜಕತ್ವದಲ್ಲಿ ಹನುಮಗಿರಿ ಮೇಳದವರಿಂದ ದಕ್ಷದ್ವರ ರಾಧಾವಿಲಾಸ, ಇಂದ್ರಜೀತು ಕಾಳಗ ಯಕ್ಷಗಾನ ನಡೆಯಿತು.


ಈ ಸಂದರ್ಭದಲ್ಲಿ ಯಕ್ಷಗಾನ ಮೇಳದ ಕಲಾವಿದರಾದ ಉಬರಡ್ಕ ಉಮೇಶ್ ಶೆಟ್ಟಿ, ಬಂಟ್ವಾಳ ಜಯರಾಮ ಆಚಾರ್ಯ‌ ಹಾಗೂ ಪುಣಚ ಯಕ್ಷ ಆಟ ಕೂಟದ ಸ್ಥಳೀಯ ಪ್ರತಿಭೆ ಜಗನ್ನಾಥ್ ಎಸ್. ಪುಣಚ ಅವರನ್ನು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಸ್.ಆರ್ ರಂಗಮೂರ್ತಿ ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಕಾರ್ಯದರ್ಶಿ ಶ್ರೀಧರ್ ಶೆಟ್ಟಿ ದೇವರಗುಂಡಿ, ಪುಣಚ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಶ್ರೀಕೃಷ್ಣ ಭಟ್ ಬರೆಂಗಾಯಿ, ಕಲ್ಪವೃಕ್ಷ ಫ್ರೆಂಡ್ಸ್’ನ ಅಧ್ಯಕ್ಷ ಹರೀಶ್ ಪೂಜಾರಿ, ಪುಣಚ ಪ್ರಾ.ವ್ಯ.ಸೇ.ಸಹಕಾರಿ ಸಂಘದ ಉಪಾಧ್ಯಕ್ಷ ಪ್ರೀತಂ ಪೂಂಜ ಅಗ್ರಾಳ ಹಾರ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಕಲ್ಪವೃಕ್ಷ ಫ್ರೆಂಡ್ಸ್ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.

LEAVE A REPLY

Please enter your comment!
Please enter your name here