ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ

0

ಪುತ್ತೂರು : ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎ.9ರಂದು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೃಢಕಲಶಾಭಿಷೇಕ ನಡೆಯಿತು.
ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆ,ಮಹಾಗಣಪತಿ ಹೋಮ ,ಕಲಶ ಪೂಜೆ, ಮಧ್ಯಾಹ್ನ ಶ್ರೀ ದೇವರಿಗೆ ಪಂಚಾಮೃತ ಅಭಿಷೇಕ ,ದೃಢಕಲಶಾಭಿಷೇಕ , ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ,ಮೊಕ್ತೇಸರರಾದ ನಾರಾಯಣ ರೈ ಮೊದೆಲ್ಕಾಡಿ ,ಮೋಹನ್ ದಾಸ್ ರೈ ,ಕಿಶೋರ್ ಕುನಾರ್ ರೈ ನಳೀಲು, ಸತೀಶ್ ರೈ ನಳೀಲು, ಪ್ರವೀಣ್ ಕುಮಾರ್ ರೈ ನಳೀಲು ,ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ವಿಲಾಸ್ ರೈ ಪಾಲ್ತಾಡು, ವಿನೋದ್ ರೈ ಪಾಲ್ತಾಡು, ನವೀನ್ ರೈ ನಡುಮನೆ ಪಾಲ್ತಾಡು, ಪ್ರಧಾನ ಕಾರ್ಯದರ್ಶಿ ಸುರೇಶ್ಚಂದ್ರ ರೈ ಪಾಲ್ತಾಡಿ ,ಸುನೀಲ್ ರೈ ಪಾಲ್ತಾಡು ಮೊದಲಾದವರಿದ್ದರು.

ಎ.13ರಂದು ರಾತ್ರಿ ವಿಶೇಷ ರಂಗಪೂಜೆ ,ಎ.14ರಂದು ಷಷ್ಠಿ ಪೂಜೆ ,ಅನ್ನಸಂತರ್ಪಣೆ
ದೇವಸ್ಥಾನದಲ್ಲಿ ಪ್ರತೀ ತಿಂಗಳ ಸಂಕಷ್ಟಿಯಂದು ಮಹಾಗಣಪತಿ ಹೋಮ ,ಎ.13ಸಂಕ್ರಮಣದಂದು ರಾತ್ರಿ ವಿಶೇಷ ರಂಗಪೂಜೆ, ಎ.14ರ ಷಷ್ಟಿಯಂದು ಮಧ್ಯಾಹ್ನ ಷಷ್ಟಿ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.ಅಲ್ಲದೇ ಭಕ್ತಾದಿಗಳು ಇಚ್ಚಿಸಿದ ದಿನಗಳಲ್ಲಿ ಶ್ರೀ ದೇವರಿಗೆ ಕಾರ್ತಿಕ ಪೂಜೆ,ಶ್ರೀ ಸತ್ಯನಾರಾಯಣ ಪೂಜೆ,ಆಶ್ಲೇಷ ಬಲಿ ,ಶ್ರೀ ಶನೈಶ್ಚರ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದೆ.ಭಕ್ತಾದಿಗಳು ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here