ಲೋಕಸಭಾ ಚುನಾವಣೆ ಪುತ್ತೂರು ನಗರಸಭಾ ವ್ಯಾಪ್ತಿಯ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

0

ರೋಷನ್ ರೈ ಬನ್ನೂರು, ಮುಹಮ್ಮದ್ ರಿಯಾಜ್, ರಂಜಿತ್ ಬಂಗೇರ ನೇಮಕ

ಪುತ್ತೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪುತ್ತೂರು ನಗರಸಭಾ ವ್ಯಾಪ್ತಿಯ ಕಾಂಗ್ರೆಸ್ ಉಸ್ತುವಾರಿಗಳನ್ನಾಗಿ ರೋಷನ್ ರೈ ಬನ್ನೂರು, ರಂಜಿತ್ ಬಂಗೇರ, ಮುಹಮ್ಮದ್ ರಿಯಾಜ್‌ರವರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಆದೇಶಿಸಿದ್ದಾರೆ. ರೋಶನ್ ರೈ ಬನ್ನೂರ್ ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದು ಯುವ ಉದ್ಯಮಿಗಳಾಗಿದ್ದಾರೆ.

ಮಹಮ್ಮದ್ ರಿಯಾಜ್ ರವರು ಪುತ್ತೂರು ನಗರಸಭಾ ಸದಸ್ಯರಾಗಿದ್ದು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ಹೊಂದಿದ್ದಾರೆ. ರಂಜಿತ್ ಬಂಗೇರರವರು ಗುತ್ತಿಗೆದಾರರಾಗಿದ್ದು ಜಿಲ್ಲಾ ಯಂಗ್ ಬಿಗ್ರೇಡ್ ನಾ ಅಧ್ಯಕ್ಷರಾಗಿ ಆರ್ಯಾಪು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು ತಮ್ಮ ಆದೇಶದಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಸ್ಥಳೀಯ ಮುಖಂಡರುಗಳ ಸಹಕಾರದೊಂದಿಗೆ ವಲಯ ,ಬೂತ್ ಮಟ್ಟದಲ್ಲಿ ಸಭೆ ನಡೆಸಿ ಸದರಿ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ಕಾರ್ಯಗಳನ್ನು ಯಶಸ್ವಿಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here