ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ -ಮದ್ಯಮುಕ್ತ ಚುನಾವಣೆಯ ಜನಜಾಗೃತಿಯ ಕರಪತ್ರ ಬಿಡುಗಡೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪುತ್ತೂರು ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ಸಭೆ ಪುತ್ತೂರು ಯೋಜನಾ ಕಛೇರಿ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಮದ್ಯಮುಕ್ತ ಚುನಾವಣೆಯನ್ನು ನಡೆಸುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮದ್ಯಮುಕ್ತ ಚುನಾವಣೆಯ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಮಹಾಬಲ ರೈ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಪ್ರಾದೇಶಿಕ ವಿಭಾಗದ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕರಪತ್ರದಲ್ಲಿನ ಮಾಹಿತಿ ನೀಡಿದರು. ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಕ್ಷೇತ್ರ ಯೋಜನಾಧಿಕಾರಿ ಶಶಿಧರ್ ಎಂ ವೇದಿಕೆಯಲ್ಲಿ ಉಪಸ್ಥಿರಿದ್ದರು.
ಜನಜಾಗೃತಿ ವತಿಯಿಂದ ನಡೆಸುವ ಕಾರ್ಯಕ್ರಮಗಳ ಬಗ್ಗೆ 2024-2025ನೇ ಸಾಲಿನ ಕ್ರಿಯಾ ಯೋಜನೆಯ ಬಗ್ಗೆ ಚರ್ಚಿಸಲಾಯಿತು. ತಾಲೂಕಿನ ಎಲ್ಲಾ ವಲಯದ ಜನಜಾಗೃತಿ ವಲಯಾದ್ಯಕ್ಷರು, ಒಕ್ಕೂಟ ವಲಯಧ್ಯಕ್ಷರು ಜನಜಾಗೃತಿ ಸದಸ್ಯರು, ಮೇಲ್ವಿಚಾರಕರು, ನವಜೀವನ ಸಮಿತಿ ಪೋಷಕರು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here