ಆಲಂಕಾರು ಶ್ರೀ ದುರ್ಗಾಂಬಾ ಪ.ಪೂ ಕಾಲೇಜಿನಲ್ಲಿ ಬೇಸಿಗೆ ಕ್ರೀಡಾ ಶಿಬಿರ,ಕಬಡ್ಡಿ ಮ್ಯಾಟ್ ಅಂಕಣದ ಉದ್ಘಾಟನೆ

0

ಆಲಂಕಾರು: ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರಿನಲ್ಲಿ 7ನೇ ತರಗತಿಯಿಂದ ಪಿಯುಸಿ ಹಂತದವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಬೇಸಿಗೆ ಕ್ರೀಡಾ ಶಿಬಿರ ಮತ್ತು ಕಬಡ್ಡಿ ಮ್ಯಾಟ್ ಅಂಕಣವನ್ನು ಪ್ರೊ ಕಬಡ್ಡಿ ಖ್ಯಾತಿಯ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಯವರು ಉದ್ಘಾಟಿಸಿ ಮಾತನಾಡಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಿದೆ.ಆಲಂಕಾರು ದುರ್ಗಾಂಬಾ ವಿದ್ಯಾ ಸಂಸ್ಥೆಯಲ್ಲಿ ನಡೆಯುವ ಕ್ರೀಡಾ ಚಟುವಟಿಕೆಗಳಿಗೆ ಉತ್ತಮ ರೀತಿಯಲ್ಲಿ ಸಹಕಾರ ನೀಡುವುದಾಗಿ ತಿಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪ್ರಶಾಂತ್ ರೈ ಯವರನ್ನು ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಪ್ರೌಢ ಶಾಲಾ ವಿಭಾಗದ ಮುಖ್ಯ ಗುರು ನವೀನ್ ರೈ, ಹಿಂದಿ ಶಿಕ್ಷಕ ಮಹೇಶ್ ಲಮಾಣಿ, ವಿಜ್ಞಾನ ಶಿಕ್ಷಕಿ ನಿವ್ಯ ಪಿ.ಎನ್, ಇತಿಹಾಸ ಉಪನ್ಯಾಸಕಿ ಶಶಿಕಲಾ ಎಸ್ ಶೆಟ್ಟಿ, ಕಚೇರಿ ಸಹಾಯಕ ಉದಯ ಚಂದ್ರಿಕಾ,ಹಿರಿಯ ವಿದ್ಯಾರ್ಥಿಗಳಾದ ರಿವನ್ ರಾಜ್ ಮತ್ತು ಚಂದ್ರಶೇಖರ ಹಾಗೂ 102 ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸಂಸ್ಥೆಯ ಆಡಳಿತಾಧಿಕಾರಿ ಶ್ರೀಪತಿ ರಾವ್ ಎಚ್ ಅತಿಥಿಗಳನ್ನು ಸ್ವಾಗತಿಸಿ. ಪ್ರಾಂಶುಪಾಲ ರೂಪ ಜೆ ರೈ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶ್ರೇಯಸ್ಸು ರೈ ವಂದಿಸಿದರು.

LEAVE A REPLY

Please enter your comment!
Please enter your name here