ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

0

ರಾಮಕುಂಜ: ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರ ಕಾರ್ಯಕ್ರಮ ನಡೆಯಿತು. ಪ್ರೊ ಕಬಡ್ಡಿ ಖ್ಯಾತಿಯ ಕಬಡ್ಡಿ ಪಟು ಪ್ರಶಾಂತ್ ಕುಮಾರ್ ರೈ ಆಗಮಿಸಿ, ವಿದ್ಯಾರ್ಥಿಗಳಿಗೆ ಪ್ರೇರಣಾಯಕ ಮಾತುಗಳನ್ನು ಆಡಿದರು. ಪ್ರಶಾಂತ್ ರೈ ಅವರನ್ನು ಸಂಸ್ಥೆಯ ವತಿಯಿಂದ ಗೌರವಪೂರ್ಣವಾಗಿ ಸನ್ಮಾನಿಸಲಾಯಿತು. ಪ್ರಶಾಂತ್ ರೈ ಅವರು ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು.

ಕಾರ್ಯಕ್ರಮದಲ್ಲಿ ಕಬಡ್ಡಿ ತರಬೇತುದಾರ ಮಾಧವ ಬಿ ಕೆ, ಮಾಜಿ ಕಬಡ್ಡಿ ಪಟು ಶ್ರೀರಾಮಕೃಷ್ಣ , ಸರಕಾರಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್, ಕಬಡ್ಡಿ ತರಬೇತುದಾರ ಜಸ್ವಂತ್, ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ, ಶಾಲಾ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಸತೀಶ್ ಭಟ್ ಅವರು ಅತಿಥಿಗಳನ್ನು ಪರಿಚಯಿಸಿ, ಸ್ವಾಗತಿಸಿದರು.

LEAVE A REPLY

Please enter your comment!
Please enter your name here