ಪುತ್ತೂರು ಕೆಎಸ್‌ಆರ್‌ಟಿಸಿ ವತಿಯಿಂದ ಪುತ್ತೂರು ಜಾತ್ರೆಗೆ ಅನ್ನಪ್ರಸಾದ ಸೇವೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಉತ್ಸವ ಸಂದರ್ಭ ಎ.11ರಂದು ಪುತ್ತೂರು ಕೋಟಿ ಚೆನ್ನಯ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದ ಕಟ್ಟೆಯಲ್ಲಿ ಶ್ರೀ ದೇವರು ಪೂಜೆ ಸ್ವೀಕರಿಸುವ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ ಅನ್ನಸಂತರ್ಪಣೆ ಸೇವೆ ನಡೆಯಿತು.


ಸಂಸ್ಥೆಯ ವತಿಯಿಂದ ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ ಮತ್ತು ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯರ ನೇತೃತ್ವದಲ್ಲಿ ಪಲ್ಲ ಪೂಜೆಯು ನಡೆಯಿತು. ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಹಾಗೂ ಸಂಸ್ಥೆಯ ಅಧಿಕಾರಿಗಳು ,ಸಿಬ್ಬಂದಿಗಳು ಹಾಗು ಶ್ರೀ ದೇವತಾ ಸಮಿತಿಯ ಅಧ್ಯಕ್ಷ ಲೋಕೇಶ್, ಕಾರ್ಯದರ್ಶಿ ರಾಜೇಶ್, ಸದಸ್ಯರಾದ ಅಶೋಕ್, ಸತೀಶ್,ರಮೇಶ್ ರೈ, ದಾಮೋದರ , ಶೇಷಗಿರಿ, ರಂಜಿತ್, ಪ್ರಶ್ಮಿತ್, ಜೀತೇಶ್, ಶಿವಪ್ರಸಾದ್,ರತನ್, ನಿತೀಶ್,ಅಕ್ಷತ್ ಕೆ, ಪುಟ್ಟಣ್ಣ ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here