ಎ.14ರಂದು ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಷು ಆಚರಣೆ ,ಷಷ್ಠಿ ಪೂಜೆ ,ಅನ್ನಸಂತರ್ಪಣೆ

0

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎ.14ರಂದು ವಿಷು ,ಷಷ್ಠಿ ಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

ಎ.14ರ ತಿಂಗಳ ಷಷ್ಟಿಯಂದು ಮಧ್ಯಾಹ್ನ ಷಷ್ಟಿ ಪೂಜೆ, ಪ್ರತೀ ತಿಂಗಳ ಸಂಕಷ್ಟಿಯಂದು ಮಹಾಗಣಪತಿ ಹೋಮ ಅನ್ನಸಂತರ್ಪಣೆ ನಡೆಯಲಿದೆ.ಅಲ್ಲದೇ ಭಕ್ತಾದಿಗಳು ಇಚ್ಚಿಸಿದ ದಿನಗಳಲ್ಲಿ ಶ್ರೀ ದೇವರಿಗೆ ಕಾರ್ತಿಕ ಪೂಜೆ,ಶ್ರೀ ಸತ್ಯನಾರಾಯಣ ಪೂಜೆ,ಆಶ್ಲೇಷ ಬಲಿ ,ಶ್ರೀ ಶನೈಶ್ಚರ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದೆ.ಭಕ್ತಾದಿಗಳು ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here