ಎ.19:ಶ್ರೀ ಸತ್ಯಸಾಯಿ ಮಂದಿರ ವಠಾರದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ

0

ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ ಪುತ್ತೂರು ದ.ಕ, ಶ್ರೀ ಬೈಂದೂರು ಪ್ರಭಾಕರ ರಾವ್ ಮೆಮೋರಿಯಲ್ ಟ್ರಸ್ಟ್ ಪುತ್ತೂರು ಇವರ ಪ್ರಾಯೋಜಕತ್ವದಲ್ಲಿ ದ.ಕ ಜಿಲ್ಲಾ ಅಂಧತ್ವ ಹತೋಟಿ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್‌ಲಾಕ್ ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಎ.19ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30ರ ತನಕ ಶ್ರೀ ಸತ್ಯಸಾಯಿ ಮಂದಿರ ವಠಾರದಲ್ಲಿ ಜರಗಲಿದೆ. ಮೊದಲು ಬಂದ 250 ನೇತ್ರ ರೋಗಿಗಳಿಗೆ ಮಾತ್ರ ಅವಕಾಶವಿದ್ದು ಪೂರ್ವಾಹ್ನ 8.30ರಿಂದ 11.30 ರತನಕ ದಾಖಲಾತಿ ಮಾಡಿಕೊಳ್ಳಬಹುದು. ಸಮಿತಿ ವತಿಯಿಂದ ಲಭ್ಯ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು.
ಎ.21ರಂದು ಬೆಳಿಗ್ಗೆ 9.30ರಿಂದ 12.30ರವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆಯುವಂತೆ ಕಾರ್ಯಕ್ರಮದ ಸಂಘಟನಾ ಸಂಸ್ಥೆಗಳು ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here