ಸ್ಕೂಟರ್‌ ಮತ್ತು ಆಟೋರಿಕ್ಷಾ ಡಿಕ್ಕಿ-ಸ್ಕೂಟರ್ ಸವಾರನಿಗೆ ಗಾಯ-ದೂರು ದಾಖಲು

0

ಪುತ್ತೂರು: ಎ.12ರಂದು ರಾತ್ರಿ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸ್ಕೂಟರ್‌ ಮತ್ತು ಆಟೋರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಸ್ಕೂಟರ್ ಸವಾರ ಸಫ್ವಾನ್‌ ಎಂಬಾತ ಗಾಯಗೊಂಡಿದ್ದು ಆತನಿಗೆ ತುಂಬೆ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಸ್ಕೂಟರ್‌ ನಲ್ಲಿದ್ದ ಸಹಸವಾರ ಮಂಗಳೂರಿನ ಬಜಾಲ್ ಗ್ರಾಮದ ಜಲ್ಲಿಗುಡ್ಡೆ ನಿವಾಸಿ ಮೊಹಮ್ಮದ್ ಮುಝಮಿಲ್ ಎಂಬವರು ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸ್ನೇಹಿತ ಸಫ್ವಾನ್‌ ಚಲಾಯಿಸುತ್ತಿದ್ದ ಸ್ಕೂಟರ್‌(KA-19-HQ-4614) ನಲ್ಲಿ ನಾನು ಸಹಸವಾರನಾಗಿದ್ದು ಮಾರಿಪಳ್ಳ ತಲುಪಿದಾಗ, ಅಬ್ದುಲ್‌ ಲತೀಫ್‌ ಎಂಬವರು ಚಲಾಯಿಸುತ್ತಿದ್ದ ಆಟೋರಿಕ್ಷಾ (KA-19-AC-2755) ಸ್ಕೂಟರ್‌ ಗೆ ಡಿಕ್ಕಿ ಹೊಡೆದಿದೆ. ಆಟೋ ಚಾಲಕನ ದುಡುಕುತನ ಹಾಗೂ ನಿರ್ಲಕ್ಷತನದಿಂದ ಈ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಕೂಟರ್ ಸವಾರ ಹಾಗೂ ಸಹಸವಾರ ಸ್ಕೂಟರ್‌ ಸಮೇತ ಡಾಮಾರು ರಸ್ತೆಗೆ ಬಿದ್ದು, ಸವಾರ ಸಫ್ವಾನ್‌ ರವರು ಗಾಯಗೊಂಡಿರುತ್ತಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 65/2024, ಕಲಂ : 279, 337 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here