ಕೌಕ್ರಾಡಿ ಒಕ್ಕೂಟದ ತ್ರೈಮಾಸಿಕ ಸಭೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ತಾಲೂಕು ಇದರ ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಇವರ ಅಧ್ಯಕ್ಷತೆಯಲ್ಲಿ ಹೊಸಮಜಲು ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ನೆಲ್ಯಾಡಿ ವಲಯ ಅಧ್ಯಕ್ಷರಾದ ಕುಶಾಲಪ್ಪ ಗೌಡ, ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್, ಸೇವಾ ಪ್ರತಿನಿಧಿ ನಮಿತಾ ಎಸ್.ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳಾದ ಕೃಷ್ಣ ಎಂ, ಹೇಮಲತಾ, ಹೇಮಾ ವಿ, ಹೇಮಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದಾಖಲಾತಿ ಸಮಿತಿ ಸದಸ್ಯರು, ಉಪಸಮಿತಿ ಸದಸ್ಯರು, ಎಲ್ಲಾ ತಂಡಗಳ ಪ್ರಬಂಧಕ ಸಂಯೋಜಕರು, ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯ ಜವಾಬ್ದಾರಿಯನ್ನು ಶಬರಿ ತಂಡದವರು ವಹಿಸಿಕೊಂಡಿದ್ದರು. ತಂಡದ ಸದಸ್ಯರಾದ ರಮೇಶ್ ಬಾಣಜಾಲು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here