ನೆಲ್ಯಾಡಿ ಜೆಸಿಐ ವತಿಯಿಂದ ಅಂಬೇಡ್ಕರ್ ಜನ್ಮದಿನಾಚರಣೆ

0

ನೆಲ್ಯಾಡಿ: ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಅವರ 133ನೇ ಜಯಂತಿಯನ್ನು ನೆಲ್ಯಾಡಿ ಜೆಸಿಐ ವತಿಯಿಂದ ನೆಲ್ಯಾಡಿ ಗ್ರಾಮ ಪಂಚಾಯತ್‌ನಲ್ಲಿ ಆಚರಿಸಲಾಯಿತು.
ಜೆಸಿಐ ಅಧ್ಯಕ್ಷೆ ಸುಚಿತ್ರ ಜೆ ಬಂಟ್ರಿಯಾಲ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ತತ್ವವನ್ನು ಪ್ರತಿಯೊಬ್ಬ ನಾಗರಿಕರು ತಮ್ಮ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಉತ್ತಮ ಸಮಾಜ ಮತ್ತು ದೇಶವನ್ನು ಕಟ್ಟಲು ಸಾಧ್ಯ. ಅವರು ನೀಡಿದ ಸಂವಿಧಾನದಿಂದ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಅವರವರ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಜೆಸಿಐ ಪೂರ್ವಾಧ್ಯಕ್ಷರಾದ ಶಿವಪ್ರಸಾದ್, ಗಿರೀಶ್, ಸದಸ್ಯ ವಿನ್ಯಾಸ್ ಬಂಟ್ರಿಯಾಲ್, ಪಂಚಾಯತ್ ಸಿಬ್ಬಂದಿ ಸೋಮನಾಥ್ ಹಾಗೂ ಊರವರು ಭಾಗವಹಿಸಿದರು.

LEAVE A REPLY

Please enter your comment!
Please enter your name here